Homeಮುಖಪುಟದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

- Advertisement -
- Advertisement -

ಭಿನ್ನ ಧರ್ಮದ ಯುವಕ-ಯುವತಿ ಜೊತೆಯಾಗಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿ, ಅವರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಗುಂಡ್ಯ ಬಳಿ ನಡೆದಿದೆ.

ಪುತ್ತೂರು ಮೂಲದ ಮುಸ್ಲಿಂ ಯುವಕ ಮತ್ತು ವೇಣೂರಿನ ಹಿಂದೂ ಯುವತಿ ಆಟೋವೊಂದರಲ್ಲಿ ಗುಂಡ್ಯಗೆ ತೆರಳಿದ್ದರು. ಅವರಿಬ್ಬರು ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಬಲಪಂಥೀಯ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಬಲವಂತವಾಗಿ ಆ ಜೋಡಿಯನ್ನು ಪುತ್ತೂರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು 14 ಸೆಕೆಂಡ್‌ಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಯುವತಿಯು “ನನ್ನ ಇಷ್ಟದವರ ಜೊತೆ ಸುತ್ತಾಡುತ್ತೇನೆ, ನೀವ್ಯಾರು ಕೇಳಲು” ಎಂದು ಬಲಪಂಥೀಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಳ್ಳುವುದನ್ನು ಕಾಣಬಹುದಾಗಿದೆ. ಬಲಪಂಥೀಯ ಕಾರ್ಯಕರ್ತನೊಬ್ಬ ಕೂಗಾಡುವುದು ಸಹ ದಾಖಲಾಗಿದೆ.

ಪುತ್ತೂರಿನ ಯುವಕ ತನ್ನ ಸ್ನೇಹಿತನ ಆಟೋದಲ್ಲಿ ಗೆಳತಿಯೊಡನೆ ಗುಂಡ್ಯ-ಸುಬ್ರಮಣ್ಯ ರಸ್ತೆಯಲ್ಲಿ ಬಂದಿದ್ದಾನೆ. ಗುಂಡ್ಯ ಸಮೀಪದ ದೇರಣೆ ಕ್ರಾಸ್‌ನಲ್ಲಿ ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಕೆಲವರು ಬಲಪಂಥೀಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದ ಕಾರ್ಯಕರ್ತರು ಆ ಜೋಡಿಗೆ ಕಿರುಕುಳ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಹಿಂದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ರೀತಿಯ ಹತ್ತಾರು ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗಿವೆ. ಅದರಲ್ಲಿಯೂ ಬಸವರಾಜ ಬೊಮ್ಮಾಯಿಯವರು ಸಿಎಂ ಆದ ನಂತರ ಪ್ರಕರಣಗಳು ವೇಗ ಪಡೆದುಕೊಂಡಿವೆ. ಅವರು ಉಡುಪಿಯಲ್ಲಿಯೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡು ಮಾತನಾಡಿದ್ದರು.‌ “ನೈತಿಕತೆ ಇರಬೇಕು.‌ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ” ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಗೆ ಒಪ್ಪಿಗೆಯ ಮುದ್ರೆಯೊತ್ತಿದ್ದರು. ಅದಾದ ನಂತರ ಮಂಗಳೂರಿನಲ್ಲಿ ಹೋಟೆಲ್‌ಗೆ ನುಗ್ಗಿ ಜೋಡಿಗೆ ಹಲ್ಲೆ ನಡೆಸಲಾಯಿತು. ಅದೇ ಮಂಗಳೂರಿನಲ್ಲಿ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಯುವನಕ ಮೇಲೆ ಹಲ್ಲೆ ನಡೆಸಿ ಮತೀಯ ಗೂಂಡಾಗಿರಿ ಮೆರಯಲಾಯಿತು. ಪುತ್ತೂರಿನಲ್ಲಿ ಬಸ್‌ನಲ್ಲಿ ವಿಭಿನ್ನ ಧರ್ಮದ ಹುಡುಗ ಹುಡುಗಿ ತೆರಳುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಕಿರುಕುಳ ನೀಡಲಾಯಿತು.  ಒಂದೇ ಕಾರಿನಲ್ಲಿ ಹಿಂದೂ ಮುಸ್ಲಿಮರು ತೆರಳುತ್ತಿದ್ದಾಗ ಅದನ್ನು ತಡೆದು ಹಿಂಸೆ ನೀಡಲಾಗಿತ್ತು. ಮುಸ್ಲಿಂ ಸಹೋದ್ಯೋಗಿಯೊಂದಿಗೆ ಹೋಟೆಲ್‌ನಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಬೆದರಿಕೆ ಹಾಕಲಾಯ್ತು. ಈ ರೀತಿಯ ಹತ್ತಾರು ಮಾರೆಲ್ ಪೊಲೀಸಿಂಗ್ ಘಟನೆಗಳು ಎರಡು ತಿಂಗಳಲ್ಲಿ ವರದಿಯಾಗಿದ್ದವು. ಈಗ ಅಂತದ್ದೆ ಘಟನೆಗಳು ಮರುಕಳಿಸಿ ಆತಂಕ ಹುಟ್ಟಿಸಿವೆ.

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...