Homeಮುಖಪುಟದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

- Advertisement -
- Advertisement -

ಭಿನ್ನ ಧರ್ಮದ ಯುವಕ-ಯುವತಿ ಜೊತೆಯಾಗಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿ, ಅವರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಗುಂಡ್ಯ ಬಳಿ ನಡೆದಿದೆ.

ಪುತ್ತೂರು ಮೂಲದ ಮುಸ್ಲಿಂ ಯುವಕ ಮತ್ತು ವೇಣೂರಿನ ಹಿಂದೂ ಯುವತಿ ಆಟೋವೊಂದರಲ್ಲಿ ಗುಂಡ್ಯಗೆ ತೆರಳಿದ್ದರು. ಅವರಿಬ್ಬರು ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಬಲಪಂಥೀಯ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಬಲವಂತವಾಗಿ ಆ ಜೋಡಿಯನ್ನು ಪುತ್ತೂರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು 14 ಸೆಕೆಂಡ್‌ಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಯುವತಿಯು “ನನ್ನ ಇಷ್ಟದವರ ಜೊತೆ ಸುತ್ತಾಡುತ್ತೇನೆ, ನೀವ್ಯಾರು ಕೇಳಲು” ಎಂದು ಬಲಪಂಥೀಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಳ್ಳುವುದನ್ನು ಕಾಣಬಹುದಾಗಿದೆ. ಬಲಪಂಥೀಯ ಕಾರ್ಯಕರ್ತನೊಬ್ಬ ಕೂಗಾಡುವುದು ಸಹ ದಾಖಲಾಗಿದೆ.

ಪುತ್ತೂರಿನ ಯುವಕ ತನ್ನ ಸ್ನೇಹಿತನ ಆಟೋದಲ್ಲಿ ಗೆಳತಿಯೊಡನೆ ಗುಂಡ್ಯ-ಸುಬ್ರಮಣ್ಯ ರಸ್ತೆಯಲ್ಲಿ ಬಂದಿದ್ದಾನೆ. ಗುಂಡ್ಯ ಸಮೀಪದ ದೇರಣೆ ಕ್ರಾಸ್‌ನಲ್ಲಿ ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಕೆಲವರು ಬಲಪಂಥೀಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದ ಕಾರ್ಯಕರ್ತರು ಆ ಜೋಡಿಗೆ ಕಿರುಕುಳ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಹಿಂದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ರೀತಿಯ ಹತ್ತಾರು ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗಿವೆ. ಅದರಲ್ಲಿಯೂ ಬಸವರಾಜ ಬೊಮ್ಮಾಯಿಯವರು ಸಿಎಂ ಆದ ನಂತರ ಪ್ರಕರಣಗಳು ವೇಗ ಪಡೆದುಕೊಂಡಿವೆ. ಅವರು ಉಡುಪಿಯಲ್ಲಿಯೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡು ಮಾತನಾಡಿದ್ದರು.‌ “ನೈತಿಕತೆ ಇರಬೇಕು.‌ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ” ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಗೆ ಒಪ್ಪಿಗೆಯ ಮುದ್ರೆಯೊತ್ತಿದ್ದರು. ಅದಾದ ನಂತರ ಮಂಗಳೂರಿನಲ್ಲಿ ಹೋಟೆಲ್‌ಗೆ ನುಗ್ಗಿ ಜೋಡಿಗೆ ಹಲ್ಲೆ ನಡೆಸಲಾಯಿತು. ಅದೇ ಮಂಗಳೂರಿನಲ್ಲಿ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಯುವನಕ ಮೇಲೆ ಹಲ್ಲೆ ನಡೆಸಿ ಮತೀಯ ಗೂಂಡಾಗಿರಿ ಮೆರಯಲಾಯಿತು. ಪುತ್ತೂರಿನಲ್ಲಿ ಬಸ್‌ನಲ್ಲಿ ವಿಭಿನ್ನ ಧರ್ಮದ ಹುಡುಗ ಹುಡುಗಿ ತೆರಳುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಕಿರುಕುಳ ನೀಡಲಾಯಿತು.  ಒಂದೇ ಕಾರಿನಲ್ಲಿ ಹಿಂದೂ ಮುಸ್ಲಿಮರು ತೆರಳುತ್ತಿದ್ದಾಗ ಅದನ್ನು ತಡೆದು ಹಿಂಸೆ ನೀಡಲಾಗಿತ್ತು. ಮುಸ್ಲಿಂ ಸಹೋದ್ಯೋಗಿಯೊಂದಿಗೆ ಹೋಟೆಲ್‌ನಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಬೆದರಿಕೆ ಹಾಕಲಾಯ್ತು. ಈ ರೀತಿಯ ಹತ್ತಾರು ಮಾರೆಲ್ ಪೊಲೀಸಿಂಗ್ ಘಟನೆಗಳು ಎರಡು ತಿಂಗಳಲ್ಲಿ ವರದಿಯಾಗಿದ್ದವು. ಈಗ ಅಂತದ್ದೆ ಘಟನೆಗಳು ಮರುಕಳಿಸಿ ಆತಂಕ ಹುಟ್ಟಿಸಿವೆ.

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....