Homeಮುಖಪುಟಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

- Advertisement -
- Advertisement -

ಭಾರತೀಯ ತಿನಿಸುಗಳ ಅತಿ ದೊಡ್ಡ ರಫ್ತದಾರ ಬ್ರಾಂಡ್ ಆದ ಹಲ್ದಿರಾಮ್ಸ್ (Haldiram’s) ಕಂಪನಿ ಟ್ವಿಟರ್‌ನಲ್ಲಿ ಸಾಕಷ್ಟು ಚರ್ಚೆಗೊಳಗಾಗುತ್ತಿದೆ. ಉಪ್ಪಿನ ಕಾಯಿ ಪ್ಯಾಕೆಟ್ ಮೇಲೆ ಉರ್ದು ಭಾಷೆ ಏಕೆ ಬಳಸಿದ್ದಿರಿ ಎಂದು ಮೈಕ್ ಹಿಡಿದು ಪ್ರಶ್ನಿಸಿದ ಸುದರ್ಶನ್ ಟಿವಿ ಪತ್ರಕರ್ತೆಯನ್ನು ಹಲ್ದಿರಾಮ್ಸ್ ಉದ್ಯೋಗಿಯೊಬ್ಬರು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಿಗರು ಆ ಉದ್ಯೋಗಿಯ ಧೈರ್ಯವನ್ನು ಮೆಚ್ಚಿ ಪೋಸ್ಟ್ ಹಾಕುತ್ತಿದ್ದಾರೆ.

ಹಲ್ದಿರಾಮ್ಸ್ ಮಳಿಗೆಯಲ್ಲಿ ಬಲಪಂಥೀಯ ಬೆಂಬಲಿಗ ಮಾಧ್ಯಮವಾದ ಸುದರ್ಶನ್ ಟಿವಿಯ ನಿರೂಪಕಿ ತಿಂಡಿ ಪ್ಯಾಕೆಟ್‌ಗಳ ಮೇಲೆ ಉರ್ದು ಏಕೆ ಬರೆದಿದ್ದೀರಿ ಎಂದು ಕೂಗಾಡಿದ್ದಾರೆ. ಅದಕ್ಕೆ ಉದ್ಯೋಗಿಯೊಬ್ಬರು ಮೇಡಂ ನಿಮಗೆ ತಿಂಡಿ ಬೇಕಾದರೆ ಕೊಂಡುಕೊಳ್ಳಿ, ಇಲ್ಲವಾದರೆ ಇಲ್ಲಿಂದ ಹೊರಡಿ ಎಂದು ತಾಕೀತು ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಉದ್ಯೋಗಿಯು “ತಿಂಡಿ ಪ್ಯಾಕೆಟ್ ಮೇಲೆ ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಸಹ ಬರೆಯಲಾಗಿದೆ. ನೀವು ಏಕೆ ಒಂದು ಭಾಷೆಯನ್ನು ನೋಡಿ ಮಾತನಾಡುತ್ತೀರಿ? ನಿಮ್ಮ ಇಂತಹ ತಂತ್ರಗಳನ್ನು ನಾವು ಪುರಸ್ಕರಿಸುವುದಿಲ್ಲ, ಇಲ್ಲಿಂದ ಹೊರಡಿ” ಎಂದು ಖಡಕ್ ಆಗಿ ಹೇಳಿದ್ದಾರೆ.

ಉರ್ದುವಿನಲ್ಲಿ ಬರೆಯುವ ಮೂಲಕ ನವರಾತ್ರಿ ಸಮಯದಲ್ಲಿ ಉಪವಾಸವಿರುದ ಹಿಂದೂಗಳಿಗೆ ಅವಮಾನ ಮಾಡಲಾಗುತ್ತಿದೆ. ಇದರಿಂದ ನೀವು ಏನನ್ನಾದರೂ ಮುಚ್ಚಿಡಲು ಬಯಸುತ್ತಿರುವಿರೆ? ಇದರಲ್ಲಿ ದನದ ಮಾಂಸ ಬಳಸಿದ್ದೀರಾ ಎಂದು ಪತ್ರಕರ್ತೆ ಪದೇ ಪದೇ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಉದ್ಯೋಗಿ. “ನೀವು ಏನು ಬೇಕಾದರೂ ಭಾವಿಸಿ. ನಿಮ್ಮ ಮೈಕ್ ತೆಗೆದು ಏನಾದರೂ ವಿಚಾರಿಸುವುದಿದ್ದರೆ ನನ್ನ ಬಳಿ ಕೇಳಿ. ಅದು ಬಿಟ್ಟು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸಬೇಡಿ. ನಿಮ್ಮೊಂದಿಗೆ ನಾನು ಮಾತನಾಡುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋವನ್ನು ಬಹಳಷ್ಟು ಜನರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅಲ್ಲಿರುವುದು ಉರ್ದು ಭಾಷೆಯಲ್ಲ, ಅದು ಅರೇಬಿಕ್ ಆಗಿದೆ. ಹಲ್ದಿರಾಮ್ಸ್‌ನ ಹಲವಾರು ಉತ್ಪನ್ನಗಳು ಮುಸ್ಲಿಂ ಜನಸಂಖ್ಯೆ ಹೆಚ್ಚು ಇರುವ ಗಲ್ಫ್ ದೇಶಗಳಿಗೆ ರಫ್ತು ಆಗುವುದರಿಂದ ಆ ಭಾಷೆಯಲ್ಲಿಯೂ ಸಹ ಮುದ್ರಿಸಲಾಗಿದೆ. ಇದರಿಂದ ಸುದರ್ಶನ್ ಟಿವಿಗೇನು ಕಷ್ಟ? ನಮ್ಮ ಭಾರತದ ನೋಟಿನಲ್ಲಿ ಉರ್ದು ಬಳಸಲಾಗಿದೆ, ರೈಲ್ವೆ ನಿಲ್ದಾಣಗಳಲ್ಲಿ ಉರ್ದು ಇರುತ್ತದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸುದರ್ಶನ್ ಟಿವಿಯು ತನ್ನ ಇಸ್ಲಾಮೋಫೋಬಿಯಾ ಕಾರಣಕ್ಕೆ ಕೆಲ ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿತ್ತು. ಯುಪಿಎಸ್‌ಸಿ ಜಿಹಾದ್ ಎಂಬ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಹಲವಾರು ವರದಿಗಳನ್ನು ಪ್ರಸಾರ ಮಾಡಿತ್ತು. ನ್ಯಾಯಾಧೀಶರು ಈ ಚಾನೆಲ್ ಉಗ್ರವಾದವನ್ನು ಪ್ರಸಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮುಸ್ಲಿಮರು ಸರ್ಕಾರಿ ಇಲಾಖೆಗಳಿಗೆ ನುಸುಳುತ್ತಿದ್ದಾರೆ ಎಂದು ಟಿವಿ ವರದಿ ಮಾಡಿದ್ದನ್ನು ಅಳಿಸುಹಾಕುವಂತೆ ಮತ್ತು ನಿಲ್ಲಿಸುವಂತೆ ಸುಪ್ರೀಂ ಸೂಚಿಸಿತ್ತು. ಒಂದು ಎಪಿಸೋಡ್ ನೋಡುವುದಲ್ಲಿಯೇ ನನಗ ಬಹಳ ಬೇಸರವಾಗಿತ್ತು. ಇನ್ನೊಂದು ಸಮುದಾಯದ ಮೇಲೆ ಆರೋಪಿಸುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಡಿ.ವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...