Homeಮುಖಪುಟಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

- Advertisement -
- Advertisement -

ಭಾರತೀಯ ತಿನಿಸುಗಳ ಅತಿ ದೊಡ್ಡ ರಫ್ತದಾರ ಬ್ರಾಂಡ್ ಆದ ಹಲ್ದಿರಾಮ್ಸ್ (Haldiram’s) ಕಂಪನಿ ಟ್ವಿಟರ್‌ನಲ್ಲಿ ಸಾಕಷ್ಟು ಚರ್ಚೆಗೊಳಗಾಗುತ್ತಿದೆ. ಉಪ್ಪಿನ ಕಾಯಿ ಪ್ಯಾಕೆಟ್ ಮೇಲೆ ಉರ್ದು ಭಾಷೆ ಏಕೆ ಬಳಸಿದ್ದಿರಿ ಎಂದು ಮೈಕ್ ಹಿಡಿದು ಪ್ರಶ್ನಿಸಿದ ಸುದರ್ಶನ್ ಟಿವಿ ಪತ್ರಕರ್ತೆಯನ್ನು ಹಲ್ದಿರಾಮ್ಸ್ ಉದ್ಯೋಗಿಯೊಬ್ಬರು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಿಗರು ಆ ಉದ್ಯೋಗಿಯ ಧೈರ್ಯವನ್ನು ಮೆಚ್ಚಿ ಪೋಸ್ಟ್ ಹಾಕುತ್ತಿದ್ದಾರೆ.

ಹಲ್ದಿರಾಮ್ಸ್ ಮಳಿಗೆಯಲ್ಲಿ ಬಲಪಂಥೀಯ ಬೆಂಬಲಿಗ ಮಾಧ್ಯಮವಾದ ಸುದರ್ಶನ್ ಟಿವಿಯ ನಿರೂಪಕಿ ತಿಂಡಿ ಪ್ಯಾಕೆಟ್‌ಗಳ ಮೇಲೆ ಉರ್ದು ಏಕೆ ಬರೆದಿದ್ದೀರಿ ಎಂದು ಕೂಗಾಡಿದ್ದಾರೆ. ಅದಕ್ಕೆ ಉದ್ಯೋಗಿಯೊಬ್ಬರು ಮೇಡಂ ನಿಮಗೆ ತಿಂಡಿ ಬೇಕಾದರೆ ಕೊಂಡುಕೊಳ್ಳಿ, ಇಲ್ಲವಾದರೆ ಇಲ್ಲಿಂದ ಹೊರಡಿ ಎಂದು ತಾಕೀತು ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಉದ್ಯೋಗಿಯು “ತಿಂಡಿ ಪ್ಯಾಕೆಟ್ ಮೇಲೆ ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಸಹ ಬರೆಯಲಾಗಿದೆ. ನೀವು ಏಕೆ ಒಂದು ಭಾಷೆಯನ್ನು ನೋಡಿ ಮಾತನಾಡುತ್ತೀರಿ? ನಿಮ್ಮ ಇಂತಹ ತಂತ್ರಗಳನ್ನು ನಾವು ಪುರಸ್ಕರಿಸುವುದಿಲ್ಲ, ಇಲ್ಲಿಂದ ಹೊರಡಿ” ಎಂದು ಖಡಕ್ ಆಗಿ ಹೇಳಿದ್ದಾರೆ.

ಉರ್ದುವಿನಲ್ಲಿ ಬರೆಯುವ ಮೂಲಕ ನವರಾತ್ರಿ ಸಮಯದಲ್ಲಿ ಉಪವಾಸವಿರುದ ಹಿಂದೂಗಳಿಗೆ ಅವಮಾನ ಮಾಡಲಾಗುತ್ತಿದೆ. ಇದರಿಂದ ನೀವು ಏನನ್ನಾದರೂ ಮುಚ್ಚಿಡಲು ಬಯಸುತ್ತಿರುವಿರೆ? ಇದರಲ್ಲಿ ದನದ ಮಾಂಸ ಬಳಸಿದ್ದೀರಾ ಎಂದು ಪತ್ರಕರ್ತೆ ಪದೇ ಪದೇ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಉದ್ಯೋಗಿ. “ನೀವು ಏನು ಬೇಕಾದರೂ ಭಾವಿಸಿ. ನಿಮ್ಮ ಮೈಕ್ ತೆಗೆದು ಏನಾದರೂ ವಿಚಾರಿಸುವುದಿದ್ದರೆ ನನ್ನ ಬಳಿ ಕೇಳಿ. ಅದು ಬಿಟ್ಟು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸಬೇಡಿ. ನಿಮ್ಮೊಂದಿಗೆ ನಾನು ಮಾತನಾಡುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋವನ್ನು ಬಹಳಷ್ಟು ಜನರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅಲ್ಲಿರುವುದು ಉರ್ದು ಭಾಷೆಯಲ್ಲ, ಅದು ಅರೇಬಿಕ್ ಆಗಿದೆ. ಹಲ್ದಿರಾಮ್ಸ್‌ನ ಹಲವಾರು ಉತ್ಪನ್ನಗಳು ಮುಸ್ಲಿಂ ಜನಸಂಖ್ಯೆ ಹೆಚ್ಚು ಇರುವ ಗಲ್ಫ್ ದೇಶಗಳಿಗೆ ರಫ್ತು ಆಗುವುದರಿಂದ ಆ ಭಾಷೆಯಲ್ಲಿಯೂ ಸಹ ಮುದ್ರಿಸಲಾಗಿದೆ. ಇದರಿಂದ ಸುದರ್ಶನ್ ಟಿವಿಗೇನು ಕಷ್ಟ? ನಮ್ಮ ಭಾರತದ ನೋಟಿನಲ್ಲಿ ಉರ್ದು ಬಳಸಲಾಗಿದೆ, ರೈಲ್ವೆ ನಿಲ್ದಾಣಗಳಲ್ಲಿ ಉರ್ದು ಇರುತ್ತದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸುದರ್ಶನ್ ಟಿವಿಯು ತನ್ನ ಇಸ್ಲಾಮೋಫೋಬಿಯಾ ಕಾರಣಕ್ಕೆ ಕೆಲ ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿತ್ತು. ಯುಪಿಎಸ್‌ಸಿ ಜಿಹಾದ್ ಎಂಬ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಹಲವಾರು ವರದಿಗಳನ್ನು ಪ್ರಸಾರ ಮಾಡಿತ್ತು. ನ್ಯಾಯಾಧೀಶರು ಈ ಚಾನೆಲ್ ಉಗ್ರವಾದವನ್ನು ಪ್ರಸಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮುಸ್ಲಿಮರು ಸರ್ಕಾರಿ ಇಲಾಖೆಗಳಿಗೆ ನುಸುಳುತ್ತಿದ್ದಾರೆ ಎಂದು ಟಿವಿ ವರದಿ ಮಾಡಿದ್ದನ್ನು ಅಳಿಸುಹಾಕುವಂತೆ ಮತ್ತು ನಿಲ್ಲಿಸುವಂತೆ ಸುಪ್ರೀಂ ಸೂಚಿಸಿತ್ತು. ಒಂದು ಎಪಿಸೋಡ್ ನೋಡುವುದಲ್ಲಿಯೇ ನನಗ ಬಹಳ ಬೇಸರವಾಗಿತ್ತು. ಇನ್ನೊಂದು ಸಮುದಾಯದ ಮೇಲೆ ಆರೋಪಿಸುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಡಿ.ವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...