Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....