Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...