Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...