Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...