Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....