Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...