Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...