Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...