Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...