Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...