Homeಕರ್ನಾಟಕಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

- Advertisement -
- Advertisement -

ಮೈಸೂರು:  ಶಕ್ತಿಧಾಮ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಟ ಶಿವರಾಜ್ ಕುಮಾರ್ ಅವರೊಂದಿಗೆ ಶಕ್ತಿಧಾಮದ ಬಗ್ಗೆ ಚರ್ಚೆ ಮಾಡಿದಾಗ ಸಂಸ್ಥೆಗಳಿಗೆ ಅನುದಾನ ನೀಡಬೇಕೆಂಬ ಪ್ರೇರಣೆ ದೊರೆತಿದ್ದಾಗಿ ತಿಳಿಸಿದ ಮುಖ್ಯಮಂತ್ರಿಯವರು, ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ ಎಂದು ಆಶಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾಯಂದಿರ ಶೋಷಣೆಯನ್ನು ನಿರಂತರವಾಗಿ ಸಮಾಜ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿರುವುದು ಅತ್ಯಂತ ನೋವಿನ ಸಂಗತಿ. ನಾವೆಲ್ಲಾ ಅಂತಃಕರಣ ಕಳೆದುಕೊಂಡಾಗ ಬಹಳಷ್ಟು ಮಕ್ಕಳು ಅನಾಥರಾಗುತ್ತಾರೆ, ಶೋಷಣೆಗೆ ಒಳಗಾಗುತ್ತಾರೆ ಎಂದರು.

ಆಶ್ರಯದಾತ ಸಂಸ್ಥೆ: ತಾಯಿ ಕರುಳನ್ನು ತೋರಿದ ಪೊಲೀಸ್‌ ಅಧಿಕಾರಿ ಕೆಂಪಯ್ಯ ಸಮಾಜದಲ್ಲಿ ಶೋಷಿತ ಹೆಣ್ಣು ಮಕ್ಕಳಿಗೆ ದಾರಿ ತೋರಲು ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರಲ್ಲಿ ತಿಳಿಸಿದರು. ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಆಶ್ರಯ, ಬದುಕು ನೀಡಬೇಕು ಎಂದು ಆಶ್ರಯದಾತ ಸಂಸ್ಥೆಯಾಗಿ ಶಕ್ತಿಧಾಮವನ್ನು ಡಾ. ರಾಜ್ ಕುಮಾರ್ ಅವರ ಕುಟುಂಬದವರು ಬೆಳೆಸಿದ್ದಾರೆ. ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೂ ತಾಯಿ ಕರುಳಿತ್ತು. ಅವರು ಇದ್ದಲ್ಲಿಂದಲೇ ಸಂಸ್ಥೆಗೆ ಶಕ್ತಿ ತುಂಬುತ್ತಿದ್ದಾರೆ. ಸಮಾಜದಲ್ಲಿ ಶೋಷಿತ, ಪೀಡಿತ ದುರ್ಬಲ ವರ್ಗದವರಿಗೆ ಸಮಾಜ ಸರ್ಕಾರ ಕೈ ಹಿಡಿದು ಎತ್ತಿ ನಡೆಸಬೇಕು. ಮಾತುಗಳಲ್ಲಿ ಸಾಮಾಜಿಕ ನ್ಯಾಯ ಆಗುವುದಿಲ್ಲ. ಅವಕಾಶಗಳು ಸಿಕ್ಕಾಗ ಅವರ ಪರವಾಗಿ ಕೆಲಸ ಮಾಡಬೇಕು. ಸಮಾಜದ ನೋವುಗಳಿಗೆ ಚಿಕಿತ್ಸೆ ಕೊಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಈ ಬಗ್ಗೆ ಎಲ್ಲರೂ ಚಿಂತನೆ ಮಾಡಿ, ಸಮಾಜಕ್ಕೆ ಮರಳಿ ನೀಡಿದಾಗ ಬದುಕಿನ ಬ್ಯಾಲೆನ್ಸ್ ಶೀಟ್‍ನಲ್ಲಿ ಸಮತೋಲನ ಕಾಯ್ದುಕೊಳ್ಳಬಹುದು ಎಂದರು.

ಮಕ್ಕಳ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿ, ಕ್ರಿಯಾಶೀಲರನ್ನಾಗಿಸಿ, ಹಲವಾರು ರಂಗಗಳಲ್ಲಿ ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವನ್ನು ತುಂಬಿತ್ತಿದೆ. ಮಕ್ಕಳ ಭವಿಷ್ಯಕ್ಕೆ ಶಕ್ತಿಯಾಗಿದೆ. ಮಕ್ಕಳಲ್ಲಿ ದೇವರಿದ್ದಾರೆ. ಮಕ್ಕಳನ್ನು ಯಾರೂ ಅನಾಥರು ಎಂದು ಕರೆಯಬಾರದು. ಅವರು ದೇವರ ಮಕ್ಕಳು ಎಂದು ಅಭಿಪ್ರಾಯಪಟ್ಟರು.

ಕೆಂಪಯ್ಯ, ಡಾ.ರಾಜ್‍ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರಂಥ ತಂದೆತಾಯಿಯರನ್ನು ಪಡೆದಿರುವ ಮಕ್ಕಳೇ ಧನ್ಯರು ಎಂದರು.

ಮೈಸೂರಿನ ಕೆ.ಆರ್.ಆಸ್ಪತ್ರೆಗೆ 100 ವರ್ಷವಾಗಿರುವ ಹಿನ್ನೆಲೆಯಲ್ಲಿ 85 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು, ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ 185 ಕೋಟಿ ರೂ.ಗಳ ವೆಚ್ಚದಲ್ಲಿ ಭೂಸ್ವಾಧೀನ ಕೆಲಸವನ್ನು ಇದೇ ವರ್ಷದಲ್ಲಿ ಮಾಡಲು ಅನುದಾನ ಮೀಸಲಿರಿಸಿದೆ. ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ನಿರಂಜನ್ ಕುಮಾರ್, ನಟ ಶಿವರಾಜ್‌ಕುಮಾರ್, ಶಕ್ತಿ ಧಾಮದ ಅಧ್ಯಕ್ಷೆ ಗೀತಾ ಶಿವರಾಜ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಷಾಜಿ ಮ್ಯಾಥ್ಯೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...