ಮುಸ್ಲಿಂ ಹೆಂಗಸರನ್ನು ಅಪಹರಿಸಿ ರೇಪ್ ಮಾಡಲು ಕರೆ ನೀಡಿದ ಸ್ವಾಮೀಜಿಯ ವಿಡಿಯೊ ವೈರಲ್ ಆಗಿದ್ದು, ತನಿಖೆ ನಡೆಸಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸೀತಾಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಸೀದಿಯ ಹೊರಗೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಹಿಂದೂ ಅರ್ಚಕ ಈ ರೀತಿಯ ಕರೆ ನೀಡಿದ್ದಾನೆ ಎನ್ನಲಾಗಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಕೇಸರಿ ವಸ್ತ್ರಗಳನ್ನು ಧರಿಸಿದ ವ್ಯಕ್ತಿಯೊಬ್ಬರು, ಖೈರಾಬಾದ್ ಎಂಬ ಸಣ್ಣ ಪಟ್ಟಣದಲ್ಲಿ ಜೀಪಿನ ಒಳಗೆ ಕೂತು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಚೀಪಿನ ಪಕ್ಕದಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನೂ ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಮೈಕ್ನಲ್ಲಿ ಮಾತನಾಡುತ್ತಿರುವ ವ್ಯಕ್ತಿಯ ಮುಂದೆ “ಜೈ ಶ್ರೀ ರಾಮ್” ಎಂದು ಕೂಗುವ ದುಷ್ಕರ್ಮಿಗಳು, ಪ್ರಚೋದನಾಕಾರಿ ಮಾತುಗಳಿಗೆ ಜೈಕಾರ ಕೂಗಿದ್ದಾರೆ.
ತನ್ನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಈ ವ್ಯಕ್ತಿಯು ಆರೋಪಿಸಿದ್ದು ಇದಕ್ಕಾಗಿ ₹ 28 ಲಕ್ಷ ಸಂಗ್ರಹಿಸಲಾಗಿದೆ ಎಂದಿದ್ದಾರೆ.
ಆ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಂ ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಬೇಕೆಂದು ಪ್ರಚೋದಿಸಲಾಗಿದೆ. ಈ ಮಾತುಗಳಿಗೆ ಯುವಕರು ಹರ್ಷೋದ್ಘಾರ ಮಾಡಿದ್ದಾರೆ.
अपर पुलिस अधीक्षक उत्तरी द्वारा जांच प्रचलित है। प्राप्त तथ्यों एवं साक्ष्यों के आधार पर नियमानुसार विधिक कार्यवाही सुनिश्चित की जाएगी।
— Sitapur Police (@sitapurpolice) April 7, 2022
ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?
ವೀಡಿಯೋವನ್ನು ಹಂಚಿಕೊಂಡಿರುವ ಫ್ಯಾಕ್ಟ್ಚೆಕ್ ವೆಬ್ಸೈಟ್ ಆಲ್ಟ್ನ್ಯೂಸ್ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್, ಈ ವೀಡಿಯೊವನ್ನು ಏಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಜುಬೈರ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸೀತಾಪುರ ಪೊಲೀಸರು, “ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.
ಜುಬೇರ್ ಅವರ ಪೋಸ್ಟ್ ಗಮನಿಸಿರುವ ಹಲವಾರು ಟ್ವಿಟರ್ ಬಳಕೆದಾರರು ಈ ಧಾರ್ಮಿಕ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆಲವರು ಈತನನ್ನು “ಬಜರಂಗ ಮುನಿ” ಎಂದು ಗುರುತಿಸಿದ್ದಾರೆ. ಯುಎನ್ ಮಾನವ ಹಕ್ಕುಗಳ ಸಂಸ್ಥೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿಬಂದಿದೆ.
ಹೆಚ್ಚಿದ ಮುಸ್ಲಿಂ ದ್ವೇಷ
ಬಲಪಂಥೀಯ ಸಂಘಟನೆಗಳ ದಿನದಿಂದ ದಿನಕ್ಕೆ ಸಮಾಜದಲ್ಲಿ ಸಾಮರಸ್ಯ ಕದಡುವುದು ಹೆಚ್ಚಾಗುತ್ತಿದೆ. ಪ್ರಚೋದನಾಕಾರಿ ಭಾಷಣಗಳಿಂದಲೇ ಗುರುತಿಸಿಕೊಂಡಿರುವ ಯತಿ ನರಸಿಂಗಾನಂದ, ಹರಿದ್ವಾರದ ಧರ್ಮ ಸಂಸತ್ನಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಬಳಿಕವೂ ಇದೇ ಪ್ರವೃತ್ತಿ ಮುಂದುವರಿಸಿದರು.
ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್ಐಆರ್ನಲ್ಲಿ ಹೆಸರಿಸಲಾಗಿದೆ.
ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.
ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ ಪ್ರಚೋದಿಸಿರುವುದು ವರದಿಯಾಗಿದೆ. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಗಾನಂದ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್ಐಆರ್



ಈ ಸ್ವಾಮಿಜೀಯನ್ನ ಒಳಗೆ ಹಾಕಬೇಕಿದೆ ,ಕಾವಿದಾರಿಗಳಿಂದ ಈ ಪದ ಬಳಕೆ ಅಕ್ಷಮ್ಯ ಅಪರಾಧ
✊✊👞👟👠👡👢👡👠👟👞