Homeಮುಖಪುಟವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ.

- Advertisement -
- Advertisement -

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು, ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆ ನೀಡಿದ್ದಾರೆ.

“ಸರ್ಕಾರ ಯಾವ ಮಾಧ್ಯಮದಲ್ಲಿ ವ್ಯವಹಿಸುತ್ತದೆಯೋ ಅದೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ. ಇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ, ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಅಮಿತ್‌ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹೇಳಿರುವುದಾಗಿ ಗೃಹ ಸಚಿವಾಲಯವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು. ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸುವ ಅಗತ್ಯವಿಲ್ಲ ಎಂದು ಶಾ ಸ್ಪಷ್ಟಪಡಿಸಿದ್ದಾರೆ. ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅಮಿತ್‌ ಶಾ ಅವರು ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಡಿಯ ಬಿ ಮಹತಾಬ್ ಅದರ ಉಪಾಧ್ಯಕ್ಷರಾಗಿದ್ದಾರೆ.

ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಮತ್ತು ಹಿಂದಿ ಬೋಧನಾ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಗೃಹ ಸಚಿವರು ಒತ್ತಿ ಹೇಳಿದ್ದಾರೆ.

ಸಚಿವ ಸಂಪುಟದ 70 ಪ್ರತಿಶತದಷ್ಟು ಕಾರ್ಯಸೂಚಿಯನ್ನು ಈಗ ಹಿಂದಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸಮಿತಿಯ ಸದಸ್ಯರಿಗೆ ಅವರು ತಿಳಿಸಿದ್ದಾರೆ. ಈಶಾನ್ಯದ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಾಗರಿಗೆ ಪರಿವರ್ತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

‘ಈ ಎಲ್ಲಾ ರಾಜ್ಯಗಳು ಹತ್ತನೇ ತರಗತಿಯವರೆಗಿನ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ’ ಎಂದು ಅವರು ತಿಳಿಸಿದ್ದಾರೆ.

ಸಮಿತಿಯ ವರದಿಯ 11ನೇ ಸಂಪುಟವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ಸಮಿತಿಯು ಸರ್ವಾನುಮತದಿಂದ ಅನುಮೋದನೆ ನೀಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಅಧಿಕಾರಿಗಳು ಮತ್ತು ಯುವಕರು ಹಿಂದಿಯ ಹೆಚ್ಚಿನ ಬಳಕೆಗೆ ಒತ್ತಾಯಿಸುತ್ತಲೇ ಇದ್ದಾರೆ, ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳು ಪ್ರಾಥಮಿಕವಾಗಿ ಭಾಷೆಯ ಕಾರಣದಿಂದಾಗಿ ರಕ್ಷಿಸಲ್ಪಟ್ಟಿವೆ ಎಂದು ಅಮಿತ್‌ ಷಾ ಅಭಿಪ್ರಾಯಪಟ್ಟಿದ್ದಾರೆ.

2019ರ ಹಿಂದಿ ದಿವಸ್‌ನಲ್ಲಿ ಭಾಷೆಯ ಕುರಿತು ಭಾಷಣ ಮಾಡಿದ್ದ ಅಮಿತ್ ಶಾ, “ಒಂದು ರಾಷ್ಟ್ರ, ಒಂದು ಭಾಷೆ” ಕಲ್ಪನೆಯನ್ನು ಮುಂದಿಟ್ಟಿದ್ದರು. “ಭಾರತ ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಆದರೆ ಪ್ರಪಂಚದ ಎದುರು ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಇಡೀ ದೇಶವು ಹೊಂದುವುದು ಅವಶ್ಯಕವಾಗಿದೆ. ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಹಿಂದಿ” ಎಂದಿದ್ದರು.

ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ, ವಿವಿಧ ರಾಜ್ಯಗಳ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ‘ಭಾರತದ ವೈವಿಧ್ಯತೆಯ ಮೂಲ ತತ್ವಗಳ ಮೇಲಿನ ದಾಳಿ ಇದಾಗಿದೆ’ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟರೆ, ‘ಸಂವಿಧಾನದ 29ನೇ ವಿಧಿ ಬಹು ಭಾಷೆಗಳನ್ನು ಗೌರವಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಿಳಿಸಿದ್ದರು.

ಅಲ್ಲಿಂದೀಚೆಗೆ, ಷಾ ಅವರು ತಮ್ಮ ಭಾಷೆಯ ಪ್ರತಿಪಾದನೆಯನ್ನು ಕಡಿಮೆ ಮಾಡಿದ್ದಾರೆ. ಹಿಂದಿ ಯಾವುದೇ ಪ್ರಾದೇಶಿಕ ಭಾಷೆಯೊಂದಿಗೆ ಸ್ಪರ್ಧಿಸುತ್ತಿಲ್ಲ, ಕೇವಲ ಪ್ರಾದೇಶಿಕ ಭಾಷಿಗರಿಗೆ ಪೂರಕವಾಗಿದೆ ಎಂದು ಪದೇ ಪದೇ  ಹೇಳುತ್ತಾ ಬಂದಿದ್ದಾರೆ.

ಹಿಂದಿ ಹೇರಿಕೆಯನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಅಧಿಕೃತ ಭಾಷೆ ಹಾಗೂ ಸಂವಹನ ಮಾಧ್ಯಮದ ಕುರಿತು ಅಮಿತ್‌ ಶಾ ಹಾಗೂ ಗೃಹ ಸಚಿವಾಲಯದ ನಿಲುವನ್ನು ಒಬ್ಬ ಕನ್ನಡಿಗನಾಗಿ ನಾನು ವಿರೋಧಿಸುತ್ತೇನೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ; ಹಾಗಾಗಲೂ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಂದಿ ಹೇರಿಕೆಯ ಈ ಹುನ್ನಾರ ಕಂಡನಾರ್ಹ. ನಮಗೆ ಇಂಗ್ಲೀಷೇ ಸಂಪರ್ಕ ಬಾಶೆಯಾಗಿರಲಿ, ಹಿಂದಿ ಬೇಡ.

  2. I do not know Hindi and do want to speak. I am kannadiga and i need kannada and English only to live in India.
    Most of the North Indian people work in southern
    States ask them to learn South Indian languages. This will help them to understand local culture.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...