ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು, ಇಂಗ್ಲಿಷ್ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆ ನೀಡಿದ್ದಾರೆ.
“ಸರ್ಕಾರ ಯಾವ ಮಾಧ್ಯಮದಲ್ಲಿ ವ್ಯವಹಿಸುತ್ತದೆಯೋ ಅದೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.
“ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ. ಇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ, ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಅಮಿತ್ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹೇಳಿರುವುದಾಗಿ ಗೃಹ ಸಚಿವಾಲಯವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಹಿಂದಿ ಭಾಷೆಯನ್ನು ಇಂಗ್ಲಿಷ್ಗೆ ಪರ್ಯಾಯವಾಗಿ ಸ್ವೀಕರಿಸಬೇಕು. ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸುವ ಅಗತ್ಯವಿಲ್ಲ ಎಂದು ಶಾ ಸ್ಪಷ್ಟಪಡಿಸಿದ್ದಾರೆ. ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಅಮಿತ್ ಶಾ ಅವರು ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಡಿಯ ಬಿ ಮಹತಾಬ್ ಅದರ ಉಪಾಧ್ಯಕ್ಷರಾಗಿದ್ದಾರೆ.
ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಮತ್ತು ಹಿಂದಿ ಬೋಧನಾ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಗೃಹ ಸಚಿವರು ಒತ್ತಿ ಹೇಳಿದ್ದಾರೆ.
ಸಚಿವ ಸಂಪುಟದ 70 ಪ್ರತಿಶತದಷ್ಟು ಕಾರ್ಯಸೂಚಿಯನ್ನು ಈಗ ಹಿಂದಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸಮಿತಿಯ ಸದಸ್ಯರಿಗೆ ಅವರು ತಿಳಿಸಿದ್ದಾರೆ. ಈಶಾನ್ಯದ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಾಗರಿಗೆ ಪರಿವರ್ತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
‘ಈ ಎಲ್ಲಾ ರಾಜ್ಯಗಳು ಹತ್ತನೇ ತರಗತಿಯವರೆಗಿನ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ’ ಎಂದು ಅವರು ತಿಳಿಸಿದ್ದಾರೆ.
ಸಮಿತಿಯ ವರದಿಯ 11ನೇ ಸಂಪುಟವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ಸಮಿತಿಯು ಸರ್ವಾನುಮತದಿಂದ ಅನುಮೋದನೆ ನೀಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಅಧಿಕಾರಿಗಳು ಮತ್ತು ಯುವಕರು ಹಿಂದಿಯ ಹೆಚ್ಚಿನ ಬಳಕೆಗೆ ಒತ್ತಾಯಿಸುತ್ತಲೇ ಇದ್ದಾರೆ, ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳು ಪ್ರಾಥಮಿಕವಾಗಿ ಭಾಷೆಯ ಕಾರಣದಿಂದಾಗಿ ರಕ್ಷಿಸಲ್ಪಟ್ಟಿವೆ ಎಂದು ಅಮಿತ್ ಷಾ ಅಭಿಪ್ರಾಯಪಟ್ಟಿದ್ದಾರೆ.
2019ರ ಹಿಂದಿ ದಿವಸ್ನಲ್ಲಿ ಭಾಷೆಯ ಕುರಿತು ಭಾಷಣ ಮಾಡಿದ್ದ ಅಮಿತ್ ಶಾ, “ಒಂದು ರಾಷ್ಟ್ರ, ಒಂದು ಭಾಷೆ” ಕಲ್ಪನೆಯನ್ನು ಮುಂದಿಟ್ಟಿದ್ದರು. “ಭಾರತ ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಆದರೆ ಪ್ರಪಂಚದ ಎದುರು ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಇಡೀ ದೇಶವು ಹೊಂದುವುದು ಅವಶ್ಯಕವಾಗಿದೆ. ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಹಿಂದಿ” ಎಂದಿದ್ದರು.
ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ, ವಿವಿಧ ರಾಜ್ಯಗಳ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ‘ಭಾರತದ ವೈವಿಧ್ಯತೆಯ ಮೂಲ ತತ್ವಗಳ ಮೇಲಿನ ದಾಳಿ ಇದಾಗಿದೆ’ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟರೆ, ‘ಸಂವಿಧಾನದ 29ನೇ ವಿಧಿ ಬಹು ಭಾಷೆಗಳನ್ನು ಗೌರವಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಿಳಿಸಿದ್ದರು.
ಅಲ್ಲಿಂದೀಚೆಗೆ, ಷಾ ಅವರು ತಮ್ಮ ಭಾಷೆಯ ಪ್ರತಿಪಾದನೆಯನ್ನು ಕಡಿಮೆ ಮಾಡಿದ್ದಾರೆ. ಹಿಂದಿ ಯಾವುದೇ ಪ್ರಾದೇಶಿಕ ಭಾಷೆಯೊಂದಿಗೆ ಸ್ಪರ್ಧಿಸುತ್ತಿಲ್ಲ, ಕೇವಲ ಪ್ರಾದೇಶಿಕ ಭಾಷಿಗರಿಗೆ ಪೂರಕವಾಗಿದೆ ಎಂದು ಪದೇ ಪದೇ ಹೇಳುತ್ತಾ ಬಂದಿದ್ದಾರೆ.
ಹಿಂದಿ ಹೇರಿಕೆಯನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಅಧಿಕೃತ ಭಾಷೆ ಹಾಗೂ ಸಂವಹನ ಮಾಧ್ಯಮದ ಕುರಿತು ಅಮಿತ್ ಶಾ ಹಾಗೂ ಗೃಹ ಸಚಿವಾಲಯದ ನಿಲುವನ್ನು ಒಬ್ಬ ಕನ್ನಡಿಗನಾಗಿ ನಾನು ವಿರೋಧಿಸುತ್ತೇನೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ; ಹಾಗಾಗಲೂ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.
As a Kannadiga, I take strong offence to @HMOIndia @AmitShah's comment on Official language & medium of communication.
Hindi is not our National Language & we will never let it to be.#IndiaAgainstHindiImposition
— Siddaramaiah (@siddaramaiah) April 8, 2022
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿರಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ



ಹಿಂದಿ ಹೇರಿಕೆಯ ಈ ಹುನ್ನಾರ ಕಂಡನಾರ್ಹ. ನಮಗೆ ಇಂಗ್ಲೀಷೇ ಸಂಪರ್ಕ ಬಾಶೆಯಾಗಿರಲಿ, ಹಿಂದಿ ಬೇಡ.
I do not know Hindi and do want to speak. I am kannadiga and i need kannada and English only to live in India.
Most of the North Indian people work in southern
States ask them to learn South Indian languages. This will help them to understand local culture.