Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....