ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಏಪ್ರಿಲ್ 10ರಂದು ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೊರೆಸ್ವಾಮಿಯವರು ತಮ್ಮ ಬದುಕಿನ ಕೊನೆ ಕ್ಷಣದವರೆಗೂ ನಿರಂತರವಾಗಿ ಹೋರಾಟಕ್ಕಾಗಿ ಮೀಸಲಿಟ್ಟವರು. ಸಿಎಎ, ಎನ್ಆರ್ಸಿ ವಿರುದ್ದ ಪ್ರತಿ ವಾರ ಪ್ರತಿಭಟನೆ ನಡೆಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಅವರು ಬಡವರಿಗೆ ಭೂಮಿ ಮತ್ತು ವಸತಿಗಾಗಿ ಶ್ರಮಿಸಿದ್ದರು. ಆದರೆ ಅವರ ನಿಧನದ ನಂತರದ ಕರ್ನಾಟಕದಲ್ಲಿ ಅನಪೇಕ್ಷಿತ ಘಟನೆಗಳು ಜರುಗುತ್ತಿವೆ. ಹಾಗಾಗಿ ಪ್ರತಿಯೊಬ್ಬರ ಸ್ವಾತಂತ್ರ್ಯದ ರಕ್ಷಣೆಗಾಗಿ, ಮತ್ತು ಸಮಾಜದ ಸೌಹಾರ್ದತೆಯನ್ನು ಕಾಪಾಡುವುದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಚ್.ಎಸ್ ದೊರೆಸ್ವಾಮಿ ಜನ್ಮದಿನಾಚರಣಾ ಸಮಿತಿಯ ಸಂಚಾಲಕರಾದ ಜಗದೀಶ್ ಜಗನ್ ರಾವ್ ತಿಳಿಸಿದ್ದಾರೆ.

ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ. ತದನಂತರ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕದ ಮುಂದಿರುವ ಸವಾಲುಗಳನ್ನು ಎದುರಿಸುವ ಬಗೆ ಹೇಗೆ ಎಂಬುದರ ಕುರಿತು ಚರ್ಚೆ ಇರುತ್ತದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಮೈಕಲ್ ಫರ್ನಾಂಡೀಸ್, ಸಮಾಜವಾದಿಗಳಾದ ಜಿ.ವಿ ಸುಂದರ್, ಕೋದಂಡರಾಮಯ್ಯ, ವೆಂಕಟೇಶ್, ಹೋರಾಟಗಾರರಾದ ಸಿರಿಮನೆ ನಾಗರಾಜ್, ಪ್ರಕಾಶ್ ಕಮ್ಮರಡಿ, ವಿವೇಕ್ ಮುಂತಾದವರು ಭಾಗವಹಿಸಲಿದ್ದಾರೆ. ಅಲ್ಲದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯರು, ವಿವಿಧ ಸಂಘಟನೆಗಳ ಮುಖಂಡರು, ಮಾಹಿತಿ ಹಕ್ಕು ಕಾರ್ಯಕರ್ತರು, ಸಾಮಾಜಿಕ ಹೋರಾಟಗಾರರು, ಯುವಕ-ಯುವತಿಯರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಎಲ್ಲಾ ಸಮಾನ ಮನಸ್ಕರು ಉಪಸ್ಥಿತರಿರುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ; ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ



Veteran Freedom Fighter Dorai Swamyji was a Secular Democratic open heart very simple legend who’s always fight for every citizen’s right , It’s my great pleasure that I spend some un valuable days with them , my hearty Salutes with Proud to them always- —-