Homeಕರ್ನಾಟಕಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಎಸ್‌ಎಸ್‌ಕೆ ಸಮಾಜದ ಯಾರಾದರೂ ಮುಸ್ಲಿಮರೊಂದಿಗೆ ವಿವಾಹವಾದರೆ ಸಾಮಾಜಿಕ ಬಹಿಷ್ಕಾರ ಹಾಕಬೇಕೆಂದು ಸಲಹೆ ನೀಡಿರುವ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿ ಅವರನ್ನು ‘ನಾನುಗೌರಿ.ಕಾಂ’ ಸಂದರ್ಶಿಸಿದೆ.

- Advertisement -
- Advertisement -

ಸೋಮವಂಶ ಸಹಾಸ್ರಾರ್ಜುನ ಕ್ಷತ್ರಿಯ (ಎಸ್‌ಎಸ್‌ಕೆ) ಸಮಾಜದ ಮುಖ್ಯ ಧರ್ಮದರ್ಶಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿಯವರು ಪತ್ರ ಬರೆದಿದ್ದು, ಎಸ್‌ಎಸ್‌ಕೆ ಸಮಾಜದ ಹೆಣ್ಣು ಹಾಗೂ ಗಂಡು ಮಕ್ಕಳು ಮುಸ್ಲಿಂ ಸಮಾಜದ ಜೊತೆ ವಿವಾಹವಾದರೆ ಸಾಮಾಜಿಕ ಬಹಿಷ್ಕಾರ ಹಾಕಬೇಕೆಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ಎಸ್‌ಎಸ್‌ಕೆ ಸಮಾಜದ ಯುವತಿಯೊಬ್ಬರು ಮುಸ್ಲಿಂ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಇದಕ್ಕೆ ‘ಲವ್‌ ಜಿಹಾದ್‌’ ಎಂದು ಕರೆದು ವಿವಾದ ಸೃಷ್ಟಿಸಲು ಯತ್ನಿಸಿದಾಗ, ಯುವತಿ ಸ್ಪಷ್ಟನೆ ನೀಡಿದ್ದಳು. ತಾನು ಇಷ್ಟಪಟ್ಟು ಮದುವೆಯಾಗಿದ್ದೇನೆಂದು ಯುವತಿ ಹೇಳಿದ್ದರಿಂದ, ವಿವಾದ ಸೃಷ್ಟಿಸಲು ಯತ್ನಿಸಿದವರಿಗೆ ಹಿನ್ನಡೆಯಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಗೇಶ್ ಅವರ ಪತ್ರ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಜದ ಮುಖ್ಯ ಧರ್ಮದರ್ಶಿ ಹಾಗೂ ಕೇಂದ್ರ ಪಂಚ ಟ್ರಸ್ಟ್‌ ಕಮಿಟಿ ಸದಸ್ಯರಿಗೆ ಪತ್ರ ಬರೆದಿರುವ ಅವರು, “ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಸಮಾಜದ ಯುವಕರು ನಮ್ಮ ಸಮಾಜದ ಹೆಣ್ಣು ಮಕ್ಕಳನ್ನು ಟಾರ್ಗೆಟ್‌ ಮಾಡಿ ಲವ್‌ ಜಿಹಾದ್‌ನಲ್ಲಿ ಸಿಲುಕಿಸಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಈಗ ಸಮಾಜ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಯಾರು ಮುಸ್ಲಿಂ ಸಮಾಜದ ಯುವಕರನ್ನು, ಹೆಣ್ಣುಮಕ್ಕಳನ್ನು ಮದುವೆ ಆಗಿರುತ್ತಾರೋ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

“ಮುಸ್ಲಿಮರೊಂದಿಗೆ ವಿವಾಹವಾದ ಕುಟುಂಬವನ್ನು ಸಮಾಜದಿಂದ ಹೊರಗಿಡುವುದು, ಆ ಕುಟುಂಬಕ್ಕೆ ಸಮಾಜದ ಯಾವುದೇ ದೇವಸ್ಥಾನದಲ್ಲಿ ಪ್ರವೇಶ ನಿರಾಕರಿಸುವುದು, ಸಮಾಜದ ಜನ ಯಾರೂ ಹೆಣ್ಣು ಕೊಡದಿರುವುದು ಮತ್ತು ತೆಗೆದುಕೊಳ್ಳದಿರುವುದು, ಸಮಾಜದ ಜನ ತಮ್ಮ ಮನೆಯ ಯಾವುದೇ ಕಾರ್ಯಕ್ರಮದಲ್ಲಿ ಕರೆಯದಿರುವುದು, ಅವರ ಮನೆಯಲ್ಲಿ ಭಾಗವಹಿಸದಿರುವುದು” ಎಂಬ ಸಲಹೆಗಳನ್ನು ನಾಗೇಶ್ ನೀಡಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

“ಇಂತಹ ಕಠಿಣ ಕ್ರಮಕೈಗೊಳ್ಳುವುದರಿಂದ ಸಮಾಜದಲ್ಲಿ ಎಚ್ಚರಿಕೆ ಗಂಟೆ ಭಾರಿಸವುದು ಅನಿವಾರ್ಯವಾಗಿದೆ. ಈ ವಿಚಾರವಾಗಿ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಟ್ರಸ್ಟ್‌ ಕಮಿಟಿಯ ಸಭೆಯಲ್ಲಿ ದೀರ್ಘವಾಗಿ ಚರ್ಚಿಸಿ ಸಮಾಲೋಚಿಸಿ” ಎಂದು ಅವರು ವಿನಂತಿಸಿಕೊಂಡಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರದ ಲೆಟರ್‌ ಹೆಡ್‌ನಲ್ಲಿ ನಾಗೇಶ್‌ ಪಿ.ಕಲಬುರ್ಗಿಯವರು ಪತ್ರ ಬರೆದಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಪತ್ರವನ್ನು ಹೇಗಾದರೂ ಬರೆದಿರಲಿ, ಈ ರೀತಿಯ ಬಹಿಷ್ಕಾರ ಸಂವಿಧಾನ ಬಾಹಿರವಲ್ಲವೇ? ಎಂಬ ಪ್ರಶ್ನೆಯನ್ನು ಮುಖ್ಯವಾಗಿಟ್ಟುಕೊಂಡು ‘ನಾನುಗೌರಿ.ಕಾಂ’ ನಾಗೇಶ್ ಅವರನ್ನು ಸಂಪರ್ಕಿಸಿತು. ಹಲವಾರು ಪ್ರಶ್ನೆಗಳನ್ನು ಕೇಳಲಾಗಿದ್ದು, ಹಾರಿಕೆಯ ಉತ್ತರಗಳನ್ನು ನಾಗೇಶ್‌ ನೀಡಿದ್ದಾರೆ.

“ಇದು ಪ್ರಾಧಿಕಾರದಿಂದ ಬರೆದ ಅಧಿಕೃತ ಪತ್ರವಲ್ಲ” ಎಂದು ಅವರು ಮೊದಲಿಗೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂ: “ಅಧಿಕೃತ ಪತ್ರವೋ ಅಲ್ಲವೋ ಬದಿಗಿರಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು, ಈ ರೀತಿಯಲ್ಲಿ ಸಂವಿಧಾನ ಬಾಹಿರ ನಿಲುವು ತಾಳಬಹುದೇ? ಮದುವೆ ಎಂಬುದು ವೈಯಕ್ತಿಕ ಆಯ್ಕೆ. ಒಂದು ಕುಟುಂಬವನ್ನು ಬಹಿಷ್ಕರಿಸುವ ಅಧಿಕಾರ ನಿಮಗೆ ಇದೆಯೇ?’’

ನಾಗೇಶ್‌: ನಮ್ಮ ಸಮಾಜದ ಹುಡುಗಿ ಲವ್‌ ಜಿಹಾದ್‌ನಲ್ಲಿ ಸಿಲುಕಿ ರಿಜಿಸ್ಟ್ರಾರ್‌ ಮದುವೆ ಆಗಿದ್ದಾಳೆ. ‌ಇದನ್ನು ಸಮಾಜದ ಮುಖಂಡರು ವಿರೋಧಿಸಿದ್ದಾರೆ. ಹೀಗೇಕೆ ಆಗುತ್ತಿದೆ ಎಂದು ಧರ್ಮದರ್ಶಿಗಳು ಚರ್ಚೆ ಮಾಡಿದರು. ಸಮಾಜದಲ್ಲಿ ಸ್ವಲ್ಪ ಎಚ್ಚರಿಕೆ ಘಂಟೆ ಬಾರಿಸಬೇಕು. ಹಾಗಾದಾಗ ಮಾತ್ರ ಇಂಥವು ಕಡಿಮೆಯಾಗಬಹುದು ಎಂದು ಅವರಲ್ಲಿ ತಿಳಿಸಿದೆ. ಕೆಲವು ಸಲಹೆ ನೀಡುವಂತೆ ಧರ್ಮದರ್ಶಿಗಳು ಸೂಚಿಸಿದರು. ಹೀಗಾಗಿ ಐದು ಸಲಹೆಗಳನ್ನು ಕೊಟ್ಟಿದ್ದೇನೆ. ಅವುಗಳನ್ನು ಒಪ್ಪುವುದು, ಬಿಡುವುದು ಸಮಿತಿಗೆ ಬಿಟ್ಟಿದ್ದು.

ಇದನ್ನೂ ಓದಿರಿ: ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌

ನಾನುಗೌರಿ.ಕಾಂ: ಅಧಿಕೃತ ಪತ್ರವೋ, ಅಲ್ಲವೋ ಬೇರೆ ಪ್ರಶ್ನೆ. ನೀವು ಸಮಾಜವನ್ನು ನೋಡುತ್ತೀರೋ; ಜಾತಿ, ಧರ್ಮ ತಾರತಮ್ಯ ನಿರ್ಬಂಧಿಸಿರುವ, ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ ಎಂದಿರುವ ಸಂವಿಧಾನವನ್ನು ಪಾಲನೆ ಮಾಡುತ್ತೀರೋ?

ನಾಗೇಶ್‌: ಸಮಾಜದವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ. ಸಮಾಜಕ್ಕಿಂತ ದೊಡ್ಡವನು ನಾನಲ್ಲ.

ನಾನುಗೌರಿ.ಕಾಂ: ಸಂವಿಧಾನ ದೊಡ್ಡದೋ ಸಮಾಜ ದೊಡ್ಡದೋ ತಿಳಿಸಿ.

ನಾಗೇಶ್‌: ಸಂವಿಧಾನವೂ ಬೇಕು, ಸಮಾಜವೂ ಬೇಕು. ಸಮಾಜದ ರಕ್ಷಣೆಯಾಗಬೇಕಲ್ಲ? ನಾನು ಸಲಹೆಗಳನ್ನು ನೀಡಿದ್ದೇನೆಯೇ ಹೊರತು, ಜಾರಿ ಮಾಡಲೇಬೇಕು ಎಂದು ಹಠ ಹಿಡಿದಿಲ್ಲ. ಸಂವಿಧಾನ ವಿರೋಧಿಯಾಗಿದ್ದರೆ ಸಮಾಜ ಸಲಹೆಗಳನ್ನು ಸಮಾಜ ನಿರಾಕರಿಸುತ್ತದೆ. ಸಂವಿಧಾನಕ್ಕಿಂತ ದೊಡ್ಡವರು ಯಾರು? ನಮ್ಮ ಸಮಾಜದ ಯುವತಿ ಮುಸ್ಲಿಂ ಸಮುದಾಯದವರನ್ನು ಮದುವೆಯಾದಲ್ಲಿ, ಇಡೀ ಕುಟುಂಬವೇ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಜಾಗೃತಿ ಮೂಡಿಸಲು ಪತ್ರ ಬರೆದಿದ್ದೇನೆ. ಇದನ್ನು ಜಾರಿ ಮಾಡಲೇಬೇಕೆಂದು ಹೇಳುತ್ತಿಲ್ಲ. ಸಮಾಜದಲ್ಲಿ ಹೆದರಿಕೆ ಹುಟ್ಟಿಲಿ ಎಂದು ಬರೆದಿದ್ದೇನೆ.

ನಾನುಗೌರಿ.ಕಾಂ: ಮದುವೆ ಎಂಬುದು ವೈಯಕ್ತಿಕ ನಿರ್ಧಾರವಾಗಿರುವಾಗ ಹೆದರಿಕೆ ಹುಟ್ಟಿಸಲು ನೀವ್ಯಾರು?

ನಾಗೇಶ್‌: ಸಮಾಜ ರಕ್ಷಣೆಯನ್ನು ನಾವು ಮಾಡಬೇಕಾಗುತ್ತದೆ.

ನಾನುಗೌರಿ.ಕಾಂ: ಸಂವಿಧಾನ ಬಾಹಿರವಾಗಿ ಸಮಾಜವನ್ನು ರಕ್ಷಣೆ ಮಾಡಬಾರದಲ್ಲ?

ನಾಗೇಶ್‌: ನನ್ನ ಸಲಹೆಗಳು ಜಾರಿಯೇನೂ ಆಗಿಲ್ಲವಲ್ಲ.

(ಕೇಂದ್ರ ಸರ್ಕಾರ ಲವ್‌ ಜಿಹಾದ್ ಕುರಿತು ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ಅವರ ಗಮನಕ್ಕೆ ತರಲಾಯಿತು. “ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಸರ್ಕಾರ ಹೇಳಿರುವುದನ್ನು ವಿವರಿಸಲಾಯಿತು.)

ನಾನುಗೌರಿ.ಕಾಂ: ಮುಸ್ಲಿಂ ವಿರುದ್ಧ ಮಾತನಾಡುತ್ತಿದ್ದೀರಿ. ಇರಲಿ, ಈಗ ನಿಮ್ಮ ಸಮಾಜದವರು ಹಿಂದೂ ಧರ್ಮದಲ್ಲೇ ಬರುವ ದಲಿತ ಹಾಗೂ ಇತರ ಜಾತಿಯವರನ್ನು ಮದುವೆಯಾದರೆ ನಿಮ್ಮ ನಿಲುವು ಏನಾಗಿರುತ್ತದೆ?

ನಾಗೇಶ್‌: ನಾನು ಸ್ಪಷ್ಟವಾಗಿ ಹೇಳುತ್ತಿರುವುದು ಮುಸ್ಲಿಂ ಬಗ್ಗೆ ಮಾತ್ರ. ಹಿಂದೂ ಸಮಾಜ ಜಾಗೃತಿಯಾಗಬೇಕಿದೆ.

ನಾನುಗೌರಿ.ಕಾಂ: ದಲಿತರೊಂದಿಗೆ ವಿವಾಹವಾದರೂ ನಿಮ್ಮ ಸಮಾಜಕ್ಕೆ ಇಂಥದ್ದೇ ಸಲಹೆ ನೀಡುತ್ತೀರಾ?

ನಾಗೇಶ್‌: ಲವ್‌ ಜಿಹಾದ್‌ ಬಗ್ಗೆ ಹೇಳುತ್ತಿದ್ದೇನೆ.

ನಾನುಗೌರಿ.ಕಾಂ: ಹಾಗಾದರೆ ಬೇರೆ ಜಾತಿಯವರನ್ನು ಮದುವೆಯಾಗಬಹುದಲ್ಲವೇ?

ನಾಗೇಶ್‌: ಇಲ್ಲಿ ಲವ್‌ ಜಿಹಾದ್‌- ಮಾತ್ರ ವಿರೋಧಿಸುತ್ತಿದ್ದೇನೆ. ಮೊನ್ನೆ ನಡೆದ ಘಟನೆ ಬೇಜಾರಾಗಿದೆ.

ಅಂತರ್‌ಜಾತಿ ವಿವಾಹದ ಕುರಿತು ಎಷ್ಟೇ ಪ್ರಶ್ನಿಸಿದರೂ ನಾಗೇಶ್ ಅವರ ಉತ್ತರ ಬದಲಾಗಲೇ ಇಲ್ಲ. ಅಂತರ್ಜಾತಿ ವಿವಾಹವು ಸಂವಿಧಾನದಲ್ಲಿ ಮಾನ್ಯವಾಗಿದೆ ಎಂದು ಪದೇ ಪದೇ ಉಲ್ಲೇಖಿಸಿದರೂ, ‘ಲವ್‌ ಜಿಹಾದ್‌, ಲವ್ ಜಿಹಾದ್‌’ ಎನ್ನುತ್ತಾ ಮಾತು ಮುಗಿಸಿದರು.

ಅಂತಾರ್ಜಾತಿ ವಿವಾಹವನ್ನು ಒಪ್ಪಲ್ಲ: ಎಸ್‌ಎಸ್‌ಕೆ ಸಮುದಾಯದ ಮುಖಂಡ

ಎಸ್‌ಎಸ್‌ಕೆ ಸಮಾಜ ಚಿಂತನ ಮಂಥನ ರಾಜ್ಯ ಸಮಿತಿಯ ಪ್ರಮುಖರಾದ ಹನುಮಂತ ಚಂದ್ರಕಾಂತ ನಿರಂಜನ ‘ನಾನುಗೌರಿ.ಕಾಂ’ ಸಂಪರ್ಕಕ್ಕೆ ಸಿಕ್ಕರು. ನಾಗೇಶ್ ಅವರಿಗೆ ಕೇಳಿದ ಪ್ರಶ್ನೆಗಳನ್ನೇ ಅವರಲ್ಲಿಯೂ ಪ್ರಸ್ತಾಪಿಸಲಾಯಿತು. “ಸಂವಿಧಾನ, ಕಾಯ್ದೆಗಳು ಒಂದು ಕಡೆ ಇದ್ದರೆ, ಸಮಾಜದ ಕಟ್ಟಳೆಗಳು ಬೇರೆ ಇವೆ” ಎಂದ ಅವರು, ನಾಗೇಶ್‌ ಅವರ ಪತ್ರವನ್ನು ಸಮರ್ಥಿಸಿಕೊಂಡರು.

ಹನುಮಂತ ಅವರು ಲವ್‌ ಜಿಹಾದ್‌ನಿಂದ ಮಾತು ಆರಂಭಿಸಿ ಹಿಜಾಬ್‌, ಮುಸ್ಲಿಮರ ಬಂದ್‌ ಇತ್ಯಾದಿಗಳನ್ನೆಲ್ಲ ಪ್ರಸ್ತಾಪಿಸಿದರು. “ಮುಸ್ಲಿಂ ಸಮುದಾಯವನ್ನು ಹೊರತುಪಡಿಸಿ ಹೇಳುವುದಾದರೆ ಹಿಂದೂ ಧರ್ಮದಲ್ಲಿನ ಇತರ ಜಾತಿಗಳೊಂದಿಗೂ ನಿಮ್ಮ ಸಮಾಜದವರು ವಿವಾಹ ಆಗುವುದನ್ನು ನೀವು ಒಪ್ಪುವುದಿಲ್ಲವೇ?” ಎಂದು ಪ್ರಶ್ನಿಸಲಾಯಿತು.

“ಅದನ್ನೂ ಕೂಡ ನಾವು ಸ್ವೀಕಾರ ಮಾಡಲ್ಲ. ಅಂತಾರ್ಜಾತಿ ವಿವಾಹವೂ ತಪ್ಪು” ಎಂದರು.

ಹುಬ್ಬಳ್ಳಿ–ಧಾರವಾಡದ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಸಮಿತಿಯ ಧರ್ಮದರ್ಶಿ ನೀಲಕಂಠ ಪಿ.ಜಡಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್‌ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಕೊಲೆ ಬೆದರಿಕೆ ಸ್ವೀಕರಿಸಿರುವ ಚಿಂತಕರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾಗಾದರೆ ಆರ್ ಎಸ್ ಎಸ್ ಮುಖಂಡರ ಮಕ್ಕಳ ಮದುವೆ ಬಗ್ಗೆ ಯೆನನ್ನುವೆ ನೀನು

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...