Homeಕರ್ನಾಟಕಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಎಸ್‌ಎಸ್‌ಕೆ ಸಮಾಜದ ಯಾರಾದರೂ ಮುಸ್ಲಿಮರೊಂದಿಗೆ ವಿವಾಹವಾದರೆ ಸಾಮಾಜಿಕ ಬಹಿಷ್ಕಾರ ಹಾಕಬೇಕೆಂದು ಸಲಹೆ ನೀಡಿರುವ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿ ಅವರನ್ನು ‘ನಾನುಗೌರಿ.ಕಾಂ’ ಸಂದರ್ಶಿಸಿದೆ.

- Advertisement -
- Advertisement -

ಸೋಮವಂಶ ಸಹಾಸ್ರಾರ್ಜುನ ಕ್ಷತ್ರಿಯ (ಎಸ್‌ಎಸ್‌ಕೆ) ಸಮಾಜದ ಮುಖ್ಯ ಧರ್ಮದರ್ಶಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿಯವರು ಪತ್ರ ಬರೆದಿದ್ದು, ಎಸ್‌ಎಸ್‌ಕೆ ಸಮಾಜದ ಹೆಣ್ಣು ಹಾಗೂ ಗಂಡು ಮಕ್ಕಳು ಮುಸ್ಲಿಂ ಸಮಾಜದ ಜೊತೆ ವಿವಾಹವಾದರೆ ಸಾಮಾಜಿಕ ಬಹಿಷ್ಕಾರ ಹಾಕಬೇಕೆಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ಎಸ್‌ಎಸ್‌ಕೆ ಸಮಾಜದ ಯುವತಿಯೊಬ್ಬರು ಮುಸ್ಲಿಂ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಇದಕ್ಕೆ ‘ಲವ್‌ ಜಿಹಾದ್‌’ ಎಂದು ಕರೆದು ವಿವಾದ ಸೃಷ್ಟಿಸಲು ಯತ್ನಿಸಿದಾಗ, ಯುವತಿ ಸ್ಪಷ್ಟನೆ ನೀಡಿದ್ದಳು. ತಾನು ಇಷ್ಟಪಟ್ಟು ಮದುವೆಯಾಗಿದ್ದೇನೆಂದು ಯುವತಿ ಹೇಳಿದ್ದರಿಂದ, ವಿವಾದ ಸೃಷ್ಟಿಸಲು ಯತ್ನಿಸಿದವರಿಗೆ ಹಿನ್ನಡೆಯಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಗೇಶ್ ಅವರ ಪತ್ರ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಜದ ಮುಖ್ಯ ಧರ್ಮದರ್ಶಿ ಹಾಗೂ ಕೇಂದ್ರ ಪಂಚ ಟ್ರಸ್ಟ್‌ ಕಮಿಟಿ ಸದಸ್ಯರಿಗೆ ಪತ್ರ ಬರೆದಿರುವ ಅವರು, “ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಸಮಾಜದ ಯುವಕರು ನಮ್ಮ ಸಮಾಜದ ಹೆಣ್ಣು ಮಕ್ಕಳನ್ನು ಟಾರ್ಗೆಟ್‌ ಮಾಡಿ ಲವ್‌ ಜಿಹಾದ್‌ನಲ್ಲಿ ಸಿಲುಕಿಸಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಈಗ ಸಮಾಜ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಯಾರು ಮುಸ್ಲಿಂ ಸಮಾಜದ ಯುವಕರನ್ನು, ಹೆಣ್ಣುಮಕ್ಕಳನ್ನು ಮದುವೆ ಆಗಿರುತ್ತಾರೋ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

“ಮುಸ್ಲಿಮರೊಂದಿಗೆ ವಿವಾಹವಾದ ಕುಟುಂಬವನ್ನು ಸಮಾಜದಿಂದ ಹೊರಗಿಡುವುದು, ಆ ಕುಟುಂಬಕ್ಕೆ ಸಮಾಜದ ಯಾವುದೇ ದೇವಸ್ಥಾನದಲ್ಲಿ ಪ್ರವೇಶ ನಿರಾಕರಿಸುವುದು, ಸಮಾಜದ ಜನ ಯಾರೂ ಹೆಣ್ಣು ಕೊಡದಿರುವುದು ಮತ್ತು ತೆಗೆದುಕೊಳ್ಳದಿರುವುದು, ಸಮಾಜದ ಜನ ತಮ್ಮ ಮನೆಯ ಯಾವುದೇ ಕಾರ್ಯಕ್ರಮದಲ್ಲಿ ಕರೆಯದಿರುವುದು, ಅವರ ಮನೆಯಲ್ಲಿ ಭಾಗವಹಿಸದಿರುವುದು” ಎಂಬ ಸಲಹೆಗಳನ್ನು ನಾಗೇಶ್ ನೀಡಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

“ಇಂತಹ ಕಠಿಣ ಕ್ರಮಕೈಗೊಳ್ಳುವುದರಿಂದ ಸಮಾಜದಲ್ಲಿ ಎಚ್ಚರಿಕೆ ಗಂಟೆ ಭಾರಿಸವುದು ಅನಿವಾರ್ಯವಾಗಿದೆ. ಈ ವಿಚಾರವಾಗಿ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಟ್ರಸ್ಟ್‌ ಕಮಿಟಿಯ ಸಭೆಯಲ್ಲಿ ದೀರ್ಘವಾಗಿ ಚರ್ಚಿಸಿ ಸಮಾಲೋಚಿಸಿ” ಎಂದು ಅವರು ವಿನಂತಿಸಿಕೊಂಡಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರದ ಲೆಟರ್‌ ಹೆಡ್‌ನಲ್ಲಿ ನಾಗೇಶ್‌ ಪಿ.ಕಲಬುರ್ಗಿಯವರು ಪತ್ರ ಬರೆದಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಪತ್ರವನ್ನು ಹೇಗಾದರೂ ಬರೆದಿರಲಿ, ಈ ರೀತಿಯ ಬಹಿಷ್ಕಾರ ಸಂವಿಧಾನ ಬಾಹಿರವಲ್ಲವೇ? ಎಂಬ ಪ್ರಶ್ನೆಯನ್ನು ಮುಖ್ಯವಾಗಿಟ್ಟುಕೊಂಡು ‘ನಾನುಗೌರಿ.ಕಾಂ’ ನಾಗೇಶ್ ಅವರನ್ನು ಸಂಪರ್ಕಿಸಿತು. ಹಲವಾರು ಪ್ರಶ್ನೆಗಳನ್ನು ಕೇಳಲಾಗಿದ್ದು, ಹಾರಿಕೆಯ ಉತ್ತರಗಳನ್ನು ನಾಗೇಶ್‌ ನೀಡಿದ್ದಾರೆ.

“ಇದು ಪ್ರಾಧಿಕಾರದಿಂದ ಬರೆದ ಅಧಿಕೃತ ಪತ್ರವಲ್ಲ” ಎಂದು ಅವರು ಮೊದಲಿಗೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂ: “ಅಧಿಕೃತ ಪತ್ರವೋ ಅಲ್ಲವೋ ಬದಿಗಿರಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು, ಈ ರೀತಿಯಲ್ಲಿ ಸಂವಿಧಾನ ಬಾಹಿರ ನಿಲುವು ತಾಳಬಹುದೇ? ಮದುವೆ ಎಂಬುದು ವೈಯಕ್ತಿಕ ಆಯ್ಕೆ. ಒಂದು ಕುಟುಂಬವನ್ನು ಬಹಿಷ್ಕರಿಸುವ ಅಧಿಕಾರ ನಿಮಗೆ ಇದೆಯೇ?’’

ನಾಗೇಶ್‌: ನಮ್ಮ ಸಮಾಜದ ಹುಡುಗಿ ಲವ್‌ ಜಿಹಾದ್‌ನಲ್ಲಿ ಸಿಲುಕಿ ರಿಜಿಸ್ಟ್ರಾರ್‌ ಮದುವೆ ಆಗಿದ್ದಾಳೆ. ‌ಇದನ್ನು ಸಮಾಜದ ಮುಖಂಡರು ವಿರೋಧಿಸಿದ್ದಾರೆ. ಹೀಗೇಕೆ ಆಗುತ್ತಿದೆ ಎಂದು ಧರ್ಮದರ್ಶಿಗಳು ಚರ್ಚೆ ಮಾಡಿದರು. ಸಮಾಜದಲ್ಲಿ ಸ್ವಲ್ಪ ಎಚ್ಚರಿಕೆ ಘಂಟೆ ಬಾರಿಸಬೇಕು. ಹಾಗಾದಾಗ ಮಾತ್ರ ಇಂಥವು ಕಡಿಮೆಯಾಗಬಹುದು ಎಂದು ಅವರಲ್ಲಿ ತಿಳಿಸಿದೆ. ಕೆಲವು ಸಲಹೆ ನೀಡುವಂತೆ ಧರ್ಮದರ್ಶಿಗಳು ಸೂಚಿಸಿದರು. ಹೀಗಾಗಿ ಐದು ಸಲಹೆಗಳನ್ನು ಕೊಟ್ಟಿದ್ದೇನೆ. ಅವುಗಳನ್ನು ಒಪ್ಪುವುದು, ಬಿಡುವುದು ಸಮಿತಿಗೆ ಬಿಟ್ಟಿದ್ದು.

ಇದನ್ನೂ ಓದಿರಿ: ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌

ನಾನುಗೌರಿ.ಕಾಂ: ಅಧಿಕೃತ ಪತ್ರವೋ, ಅಲ್ಲವೋ ಬೇರೆ ಪ್ರಶ್ನೆ. ನೀವು ಸಮಾಜವನ್ನು ನೋಡುತ್ತೀರೋ; ಜಾತಿ, ಧರ್ಮ ತಾರತಮ್ಯ ನಿರ್ಬಂಧಿಸಿರುವ, ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ ಎಂದಿರುವ ಸಂವಿಧಾನವನ್ನು ಪಾಲನೆ ಮಾಡುತ್ತೀರೋ?

ನಾಗೇಶ್‌: ಸಮಾಜದವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ. ಸಮಾಜಕ್ಕಿಂತ ದೊಡ್ಡವನು ನಾನಲ್ಲ.

ನಾನುಗೌರಿ.ಕಾಂ: ಸಂವಿಧಾನ ದೊಡ್ಡದೋ ಸಮಾಜ ದೊಡ್ಡದೋ ತಿಳಿಸಿ.

ನಾಗೇಶ್‌: ಸಂವಿಧಾನವೂ ಬೇಕು, ಸಮಾಜವೂ ಬೇಕು. ಸಮಾಜದ ರಕ್ಷಣೆಯಾಗಬೇಕಲ್ಲ? ನಾನು ಸಲಹೆಗಳನ್ನು ನೀಡಿದ್ದೇನೆಯೇ ಹೊರತು, ಜಾರಿ ಮಾಡಲೇಬೇಕು ಎಂದು ಹಠ ಹಿಡಿದಿಲ್ಲ. ಸಂವಿಧಾನ ವಿರೋಧಿಯಾಗಿದ್ದರೆ ಸಮಾಜ ಸಲಹೆಗಳನ್ನು ಸಮಾಜ ನಿರಾಕರಿಸುತ್ತದೆ. ಸಂವಿಧಾನಕ್ಕಿಂತ ದೊಡ್ಡವರು ಯಾರು? ನಮ್ಮ ಸಮಾಜದ ಯುವತಿ ಮುಸ್ಲಿಂ ಸಮುದಾಯದವರನ್ನು ಮದುವೆಯಾದಲ್ಲಿ, ಇಡೀ ಕುಟುಂಬವೇ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಜಾಗೃತಿ ಮೂಡಿಸಲು ಪತ್ರ ಬರೆದಿದ್ದೇನೆ. ಇದನ್ನು ಜಾರಿ ಮಾಡಲೇಬೇಕೆಂದು ಹೇಳುತ್ತಿಲ್ಲ. ಸಮಾಜದಲ್ಲಿ ಹೆದರಿಕೆ ಹುಟ್ಟಿಲಿ ಎಂದು ಬರೆದಿದ್ದೇನೆ.

ನಾನುಗೌರಿ.ಕಾಂ: ಮದುವೆ ಎಂಬುದು ವೈಯಕ್ತಿಕ ನಿರ್ಧಾರವಾಗಿರುವಾಗ ಹೆದರಿಕೆ ಹುಟ್ಟಿಸಲು ನೀವ್ಯಾರು?

ನಾಗೇಶ್‌: ಸಮಾಜ ರಕ್ಷಣೆಯನ್ನು ನಾವು ಮಾಡಬೇಕಾಗುತ್ತದೆ.

ನಾನುಗೌರಿ.ಕಾಂ: ಸಂವಿಧಾನ ಬಾಹಿರವಾಗಿ ಸಮಾಜವನ್ನು ರಕ್ಷಣೆ ಮಾಡಬಾರದಲ್ಲ?

ನಾಗೇಶ್‌: ನನ್ನ ಸಲಹೆಗಳು ಜಾರಿಯೇನೂ ಆಗಿಲ್ಲವಲ್ಲ.

(ಕೇಂದ್ರ ಸರ್ಕಾರ ಲವ್‌ ಜಿಹಾದ್ ಕುರಿತು ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ಅವರ ಗಮನಕ್ಕೆ ತರಲಾಯಿತು. “ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಸರ್ಕಾರ ಹೇಳಿರುವುದನ್ನು ವಿವರಿಸಲಾಯಿತು.)

ನಾನುಗೌರಿ.ಕಾಂ: ಮುಸ್ಲಿಂ ವಿರುದ್ಧ ಮಾತನಾಡುತ್ತಿದ್ದೀರಿ. ಇರಲಿ, ಈಗ ನಿಮ್ಮ ಸಮಾಜದವರು ಹಿಂದೂ ಧರ್ಮದಲ್ಲೇ ಬರುವ ದಲಿತ ಹಾಗೂ ಇತರ ಜಾತಿಯವರನ್ನು ಮದುವೆಯಾದರೆ ನಿಮ್ಮ ನಿಲುವು ಏನಾಗಿರುತ್ತದೆ?

ನಾಗೇಶ್‌: ನಾನು ಸ್ಪಷ್ಟವಾಗಿ ಹೇಳುತ್ತಿರುವುದು ಮುಸ್ಲಿಂ ಬಗ್ಗೆ ಮಾತ್ರ. ಹಿಂದೂ ಸಮಾಜ ಜಾಗೃತಿಯಾಗಬೇಕಿದೆ.

ನಾನುಗೌರಿ.ಕಾಂ: ದಲಿತರೊಂದಿಗೆ ವಿವಾಹವಾದರೂ ನಿಮ್ಮ ಸಮಾಜಕ್ಕೆ ಇಂಥದ್ದೇ ಸಲಹೆ ನೀಡುತ್ತೀರಾ?

ನಾಗೇಶ್‌: ಲವ್‌ ಜಿಹಾದ್‌ ಬಗ್ಗೆ ಹೇಳುತ್ತಿದ್ದೇನೆ.

ನಾನುಗೌರಿ.ಕಾಂ: ಹಾಗಾದರೆ ಬೇರೆ ಜಾತಿಯವರನ್ನು ಮದುವೆಯಾಗಬಹುದಲ್ಲವೇ?

ನಾಗೇಶ್‌: ಇಲ್ಲಿ ಲವ್‌ ಜಿಹಾದ್‌- ಮಾತ್ರ ವಿರೋಧಿಸುತ್ತಿದ್ದೇನೆ. ಮೊನ್ನೆ ನಡೆದ ಘಟನೆ ಬೇಜಾರಾಗಿದೆ.

ಅಂತರ್‌ಜಾತಿ ವಿವಾಹದ ಕುರಿತು ಎಷ್ಟೇ ಪ್ರಶ್ನಿಸಿದರೂ ನಾಗೇಶ್ ಅವರ ಉತ್ತರ ಬದಲಾಗಲೇ ಇಲ್ಲ. ಅಂತರ್ಜಾತಿ ವಿವಾಹವು ಸಂವಿಧಾನದಲ್ಲಿ ಮಾನ್ಯವಾಗಿದೆ ಎಂದು ಪದೇ ಪದೇ ಉಲ್ಲೇಖಿಸಿದರೂ, ‘ಲವ್‌ ಜಿಹಾದ್‌, ಲವ್ ಜಿಹಾದ್‌’ ಎನ್ನುತ್ತಾ ಮಾತು ಮುಗಿಸಿದರು.

ಅಂತಾರ್ಜಾತಿ ವಿವಾಹವನ್ನು ಒಪ್ಪಲ್ಲ: ಎಸ್‌ಎಸ್‌ಕೆ ಸಮುದಾಯದ ಮುಖಂಡ

ಎಸ್‌ಎಸ್‌ಕೆ ಸಮಾಜ ಚಿಂತನ ಮಂಥನ ರಾಜ್ಯ ಸಮಿತಿಯ ಪ್ರಮುಖರಾದ ಹನುಮಂತ ಚಂದ್ರಕಾಂತ ನಿರಂಜನ ‘ನಾನುಗೌರಿ.ಕಾಂ’ ಸಂಪರ್ಕಕ್ಕೆ ಸಿಕ್ಕರು. ನಾಗೇಶ್ ಅವರಿಗೆ ಕೇಳಿದ ಪ್ರಶ್ನೆಗಳನ್ನೇ ಅವರಲ್ಲಿಯೂ ಪ್ರಸ್ತಾಪಿಸಲಾಯಿತು. “ಸಂವಿಧಾನ, ಕಾಯ್ದೆಗಳು ಒಂದು ಕಡೆ ಇದ್ದರೆ, ಸಮಾಜದ ಕಟ್ಟಳೆಗಳು ಬೇರೆ ಇವೆ” ಎಂದ ಅವರು, ನಾಗೇಶ್‌ ಅವರ ಪತ್ರವನ್ನು ಸಮರ್ಥಿಸಿಕೊಂಡರು.

ಹನುಮಂತ ಅವರು ಲವ್‌ ಜಿಹಾದ್‌ನಿಂದ ಮಾತು ಆರಂಭಿಸಿ ಹಿಜಾಬ್‌, ಮುಸ್ಲಿಮರ ಬಂದ್‌ ಇತ್ಯಾದಿಗಳನ್ನೆಲ್ಲ ಪ್ರಸ್ತಾಪಿಸಿದರು. “ಮುಸ್ಲಿಂ ಸಮುದಾಯವನ್ನು ಹೊರತುಪಡಿಸಿ ಹೇಳುವುದಾದರೆ ಹಿಂದೂ ಧರ್ಮದಲ್ಲಿನ ಇತರ ಜಾತಿಗಳೊಂದಿಗೂ ನಿಮ್ಮ ಸಮಾಜದವರು ವಿವಾಹ ಆಗುವುದನ್ನು ನೀವು ಒಪ್ಪುವುದಿಲ್ಲವೇ?” ಎಂದು ಪ್ರಶ್ನಿಸಲಾಯಿತು.

“ಅದನ್ನೂ ಕೂಡ ನಾವು ಸ್ವೀಕಾರ ಮಾಡಲ್ಲ. ಅಂತಾರ್ಜಾತಿ ವಿವಾಹವೂ ತಪ್ಪು” ಎಂದರು.

ಹುಬ್ಬಳ್ಳಿ–ಧಾರವಾಡದ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಸಮಿತಿಯ ಧರ್ಮದರ್ಶಿ ನೀಲಕಂಠ ಪಿ.ಜಡಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್‌ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಕೊಲೆ ಬೆದರಿಕೆ ಸ್ವೀಕರಿಸಿರುವ ಚಿಂತಕರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾಗಾದರೆ ಆರ್ ಎಸ್ ಎಸ್ ಮುಖಂಡರ ಮಕ್ಕಳ ಮದುವೆ ಬಗ್ಗೆ ಯೆನನ್ನುವೆ ನೀನು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...