Homeಮುಖಪುಟಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

- Advertisement -
- Advertisement -

ರಾಜ್ಯದಲ್ಲಿ ಪಕ್ಷವು ಮತ್ತೆ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ ಎಂದು ಪಶ್ಚಿಮ ಬಂಗಾಳದ ಸಿಪಿಐಎಂ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಕಷ್ಟದ ಹಂತವನ್ನು ಎದುರಿಸುತ್ತಿದ್ದು, ಪಕ್ಷಕ್ಕೆ ಕಾಯಕಲ್ಪ ನೀಡುವುದು ಮತ್ತು ಅದನ್ನು ಮತ್ತೆ ಕ್ರಿಯಾಶೀಲಗೊಳಿಸುವುದು ಪಕ್ಷವು ಪ್ರಸ್ತುತ ಎದುರಿಸುತ್ತಿರುವ ತಕ್ಷಣದ ಸವಾಲುಗಳಾಗಿವೆ ಎಂದು ಅವರು ಹೇಳಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ನಡೆಯುತ್ತಿರುವ ಸಿಪಿಐಎಂನ 23 ನೇ ಮಹಾಅಧಿವೇಶನದಲ್ಲಿ ಮಾತನಾಡಿದ ಅವರು, “ಇತ್ತೀಚಿನ ವರ್ಷಗಳಿಗೆ ಹೋಲಿಸಿದರೆ, ಈಗ ಹೆಚ್ಚು ಯುವಕರು ನಮ್ಮೊಂದಿಗೆ ಹೊಂದಿಕೊಂಡಿದ್ದಾರೆ. ನಾವು ಅವರಿಗೆ ಆಳವಾದ ಪಕ್ಷದ ತರಗತಿಗಳನ್ನು ನೀಡಬೇಕು. ಕಮ್ಯುನಿಸ್ಟ್ ಚೌಕಟ್ಟು ಮತ್ತು ಸಿದ್ಧಾಂತದ ಪ್ರಕಾರ ಅವರನ್ನು ಸಿದ್ಧಪಡಿಸಬೇಕು. ಇಷ್ಟೆಲ್ಲಾ ಕಷ್ಟಗಳ ನಡುವೆಯೂ ಸಿಪಿಐಎಂ ಮತ್ತೊಮ್ಮೆ ರಾಜ್ಯದಲ್ಲಿ ತನ್ನ ಹಿಂದಿನ ವೈಭವ ಮತ್ತು ಶಕ್ತಿಗೆ ಮರಳಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಮತ್ತು 23ನೇ ಪಕ್ಷದ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ನಿರ್ಣಯಗಳನ್ನು ಅನುಸರಿಸಿ ನಾವು ಪಕ್ಷವನ್ನು ಮರುಸಂಘಟಿಸಿ ಬಲಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ರಾಜ್ಯದಲ್ಲಿ 11 ವರ್ಷಗಳ ತೃಣಮೂಲ ಮತ್ತು ಒಕ್ಕೂಟ ಸರ್ಕಾರದಲ್ಲಿ ಎಂಟು ವರ್ಷಗಳ ಮೋದಿ ಆಡಳಿತದಿಂದ ಬೇಸತ್ತಿರುವ ಜನರು ಈಗ ಬದಲಾವಣೆ ಬಯಸುತ್ತಿದ್ದಾರೆ. ಎಡಪಕ್ಷಗಳ ಪ್ರಸ್ತುತತೆ ಮತ್ತು ಪ್ರಾಮುಖ್ಯತೆಯನ್ನು ನಾವು ಅವರಿಗೆ ನೆನಪಿಸಬೇಕು ಎಂದು ಸಲೀಂ ಹೇಳಿದ್ದಾರೆ.

“ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರ ಜಾರಿಗೊಳಿಸಿದ ವಿವಿಧ ಪ್ರಗತಿಪರ ಯೋಜನೆಗಳು ಮತ್ತು ಕಲ್ಯಾಣ ಯೋಜನೆಗಳು ಬಂಗಾಳದ ಜನರಿಗೆ ಮಾದರಿಯಾಗಬೇಕು. ಹಿಂದಿನ ವರ್ಷಗಳಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಎಡ ಸರ್ಕಾರಗಳ ಜನಕೇಂದ್ರಿತ ಆಡಳಿತವನ್ನು ನಾವು ಅವರಿಗೆ ನೆನಪಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ರಾಜ್ಯದಲ್ಲಿ ಸಿಪಿಐಎಂ ನೆಲೆಯನ್ನು ನಾಶಪಡಿಸಲು ತೃಣಮೂಲ ತೀವ್ರ ಪ್ರಯತ್ನ ನಡೆಸುತ್ತಿದೆ. ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳು ಅದಕ್ಕೆ ಸಾಕ್ಷಿ. ಪಕ್ಷದ ಕಾರ್ಯಕರ್ತರು ಪ್ರಬಲ ಪ್ರತಿರೋಧವನ್ನು ತೋರಿಸುತ್ತಾರೆ, ಆದರೆ ಅಸುರಕ್ಷಿತ ಸ್ಥಿತಿಯಲ್ಲಿದ್ದಾರೆ. ನಾವು ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಬೇಕು ಮತ್ತು ಇಂತಹ ಕ್ರಮಗಳ ವಿರುದ್ಧ ಅವರನ್ನು ಒಗ್ಗೂಡಿಸಬೇಕು” ಎಂದು ಸಲೀಂ ತಿಳಿಸಿದ್ದಾರೆ.

“ಬಲಪಂಥೀಯರು ರಾಷ್ಟ್ರೀಯ ಮಾಧ್ಯಮಗಳ ಬಲವಾದ ಬೆಂಬಲದೊಂದಿಗೆ ಕೇಂದ್ರದಲ್ಲಿ ಮೋದಿ ಮತ್ತು ಬಂಗಾಳದಲ್ಲಿ ದೀದಿ ಮಾತ್ರ ಇದ್ದಾರೆ, ದೇಶದಲ್ಲಿ ಬೇರೆ ಯಾರೂ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಎಡಪಂಥೀಯರ ಕೊಡುಗೆಗಳನ್ನು ಮತ್ತು ಅಸ್ತಿತ್ವವನ್ನೇ ದೂರವಿಡಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತದೆ. ಆದರೆ ಅದು ಸುಲಭವಲ್ಲ, ಎಡಪಕ್ಷವು ಬಂಗಾಳದ ಸಾಮಾಜಿಕ ಮತ್ತು ಸಾಂಸ್ಕೃತಿಕ ರಚನೆಯಲ್ಲೆ ಇದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

“ಎಡಪಂಥೀಯರು ಅತ್ಯಂತ ಪ್ರಯಾಸಕರ ಸಮಯದಲ್ಲೂ ಆ ಸಂಪರ್ಕವನ್ನು ಅಖಂಡವಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮ ಮತ್ತು ಜಾತಿಯ ಆಧಾರದಲ್ಲಿ ರಾಜ್ಯವನ್ನು ವಿಭಜಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಅಂತಹ ಎಲ್ಲಾ ಪ್ರಯತ್ನಗಳನ್ನು ನಾವು ವಿರೋಧಿಸಬೇಕು. ಎಡಪಂಥೀಯರ ಕೊಡುಗೆಯ ನೆನಪುಗಳನ್ನು ಜನರಲ್ಲಿ ಜೀವಂತವಾಗಿ ಕಾಪಾಡುವ ಜವಾಬ್ದಾರಿ ಬಂಗಾಳದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಕಾರ್ಮಿಕ ವರ್ಗದ ಮೇಲಿದೆ” ಎಂದು ಅವರು ಹೇಳಿದ್ದಾರೆ.

“ಬಂಗಾಳದಲ್ಲಿ ಇತ್ತೀಚೆಗೆ ನಡೆದ ಮುನ್ಸಿಪಲ್ ಚುನಾವಣೆಯನ್ನು ತೃಣಮೂಲ ಪಕ್ಷ ಹಾಳು ಮಾಡಿದೆ. ಎಡಪಕ್ಷಗಳ ಭದ್ರಕೋಟೆಯಾಗಿರುವ ಕ್ಷೇತ್ರಗಳಲ್ಲಿ ಅವರು ವಿಶೇಷವಾಗಿ ಹಿಂಸಾಚಾರ ನಡೆಸಿದ್ದಾರೆ. ನಮ್ಮ ಕೆಲವು ಅಭ್ಯರ್ಥಿಗಳಿಗೆ ಪ್ರಚಾರ ಕೂಡ ಸಾಧ್ಯವಾಗಿರಲಿಲ್ಲ. ಆದರೂ, ನಮ್ಮ ಮತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದೇವೆ. ಜನರು ಬದಲಾವಣೆ ಬಯಸುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಅವರು ಹೇಲಿದ್ದಾರೆ.

“ಹೊಸದಾಗಿ ರಚನೆಯಾಗಿರುವ ರಾಜ್ಯ ಸಮಿತಿಯಲ್ಲಿ 30%ದಷ್ಟು ಯುವಕರು ಇದ್ದಾರೆ. ಹೆಚ್ಚಿನ ಯುವಕರು ಸಿಪಿಐ-ಎಂ ಸೇರಲು ಬರುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷವು ಮತ್ತೊಮ್ಮೆ ಹುಟ್ಟಿಕೊಳ್ಳುವುದು ಖಂಡಿತ. ಈ ನಿಟ್ಟಿನಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಈಗಾಗಲೇ ಆರಂಭವಾಗಿದೆ” ಎಂದು ಸಲೀಂ ಹೇಳಿದ್ದಾರೆ.

“ಬಂಗಾಳದಲ್ಲಿ ಸಿಪಿಐಎಂ ಬಿಜೆಪಿಯೊಂದಿಗೆ ಸೌಮ್ಯ ಧೋರಣೆ ಅನುಸರಿಸುತ್ತಿದೆ ಎಂಬ ಪ್ರಚಾರ ಸಂಪೂರ್ಣವಾಗಿ ಸರಿಯಲ್ಲ. ಇಂತಹ ಪ್ರಚಾರಗಳು ‘ನಾಗ್ಪುರದ ಮೆದುಳಿನಿಂದ ಹುಟ್ಟಿದ ಕೂಸು’. ಬಂಗಾಳದಲ್ಲಾಗಲಿ ಅಥವಾ ಬೇರೆಲ್ಲಿಯಾದರೂ, ಎಡಪಂಥೀಯರು ಬಲಪಂಥೀಯ ಶಕ್ತಿಗಳ ಕಡೆಗೆ ಸೌಮ್ಯವಾದ ವಿಧಾನವನ್ನು ಅಳವಡಿಸಿಕೊಳ್ಳುವುದಿಲ್ಲ. ಬಲಪಂಥೀಯರು ಮೊದಲಿಗೆ ಮತ್ತು ಪ್ರಮುಖವಾಗಿ ನಮ್ಮ ಮೇಲೆ ದಾಳಿ ಮಾಡುತ್ತಾರೆ. ಯಾಕೆಂದರೆ ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುವ ಏಕೈಕ ಶಕ್ತಿ ಎಡಪಂಥೀಯರು ಮಾತ್ರ. ಇದು ಬಂಗಾಳದಲ್ಲೂ ಭಿನ್ನವಾಗಿಲ್ಲ” ಎಂದು ಮೊಹಮ್ಮದ್‌ ಸಲೀಂ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...