Homeಅಂತರಾಷ್ಟ್ರೀಯ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

- Advertisement -
- Advertisement -

ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಅವರು ಭಾರತವನ್ನು ಹೊಗಳಿದ್ದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಗೆ ಭಾರತ ಎಂದರೆ ತುಂಬಾ ಇಷ್ಟವಿದ್ದರೆ ಅವರು ಭಾರತಕ್ಕೆ ತೊಲಗಲಿ ಎಂದು ಹೇಳಿದ್ದಾರೆ.

ಇಮ್ರಾನ್‌ ಖಾನ್ ಭಾರತವನ್ನು ‘ಗೌರವ ಪ್ರಜ್ಞೆ ಹೊಂದಿರುವ ರಾಷ್ಟ್ರ’ ಎಂದು ಕರೆದ ನಂತರ ಮರ್ಯಮ್ ಅವರು ಪ್ರಧಾನಿಯನ್ನು ಟೀಕಿಸಿದ್ದಾರೆ. ಮರ್ಯಮ್ ಅವರು ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯಾಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಉಪಾಧ್ಯಕ್ಷೆಯೂ ಆಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವಿಶ್ವಾಸ ನಿರ್ಣಯದ ಮುನ್ನ ಶುಕ್ರವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್‌, ತಾನು ಭಾರತದ ವಿರುದ್ಧ ಇಲ್ಲ ಮತ್ತು ಭಾರತದಲ್ಲಿ ತನಗೆ ಸಾಕಷ್ಟು ಅನುಯಾಯಿಗಳು ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ 

“ಯಾವುದೇ ಮಹಾಶಕ್ತಿ ಭಾರತವನ್ನು ತನ್ನ ಹಿತಾಸಕ್ತಿಗೆ ವಿರುದ್ಧವಾಗಿ ಏನು ಮಾಡಲು ಒತ್ತಾಯಿಸುವುದಿಲ್ಲ. ಭಾರತ ನಿರ್ಬಂಧಗಳ ಹೊರತಾಗಿಯೂ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ. ಯಾರೂ ಭಾರತವನ್ನು ನಿರ್ದೇಶಿಸಲು ಸಾಧ್ಯವಿಲ್ಲ. ಯುರೋಪಿಯನ್ ಒಕ್ಕೂಟದ ರಾಯಭಾರಿಗಳು ಇಲ್ಲಿ ಹೇಳಿರುವುದನ್ನು, ಭಾರತದಲ್ಲಿ ಹೇಳಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ. ಭಾರತವು ಸಾರ್ವಭೌಮ ರಾಷ್ಟ್ರವಾಗಿರುವುದರಿಂದ ಅವರಿಗೆ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮರ್ಯಮ್, ಇಮ್ರಾನ್‌ ಖಾನ್‌ಗೆ ಹುಚ್ಚು ಹಿಡಿದಿದೆ ಎಂದು ಹೇಳಿದ್ದಾರೆ. “ನಿಮಗೆ ಭಾರತದ ಮೇಲೆ ತುಂಬಾ ಪ್ರೀತಿಯಿದ್ದರೆ, ಅಲ್ಲಿಗೆ ತೆರಳಿ. ಪಾಕಿಸ್ತಾನದ ಜೀವನವನ್ನು ಬಿಟ್ಟುಬಿಡಿ” ಎಂದು ಮರ್ಯಮ್‌ ಹೇಳಿದ್ದಾರೆ.

ಪ್ರಧಾನಿ ಇಮ್ರಾನ್‌ ಅವರು ಭಾರತವನ್ನು ಹೊಗಳಿದ್ದು ಇದೇ ಮೊದಲಲ್ಲ. ಕಳೆದ ವಾರ ಅವರು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ್ದರು. “ಭಾರತ ತನ್ನ ಸ್ವತಂತ್ರ ವಿದೇಶಾಂಗ ನೀತಿಯನ್ನು ರಕ್ಷಿಸುತ್ತದೆ ಮತ್ತು ಅದು ಅದರ ಜನರ ಮೇಲೆ ಕೇಂದ್ರೀಕೃತವಾಗಿದೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

342 ಸಂಸದರಿರುವ ಪಾಕಿಸ್ತಾನ್‌ ಸಂಸತ್ತಿನಲ್ಲಿ ಇಮ್ರಾನ್‌ ಖಾನ್‌ ತನ್ನ ಬಹುಮತವನ್ನು ಕಳೆದುಕೊಂಡಿದ್ದಾರೆ. ಅವರು ದೇಶದ ಇತಿಹಾಸದಲ್ಲಿ ಅವಿಶ್ವಾಸ ನಿರ್ಣಯದಲ್ಲಿ ಮತ ಚಲಾಯಿಸಲ್ಪಡುವ ಮೊದಲ ಪ್ರಧಾನಿಯಾಗುವ ಸಾಧ್ಯತೆಯನ್ನು ಎದುರಿಸುತ್ತಿದ್ದಾರೆ.

ಪಾಕಿಸ್ತಾನದ ಯಾವೊಬ್ಬ ಪ್ರಧಾನಿಯೂ ಇದುವರೆಗೆ ಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ.

ಈ ಮಧ್ಯೆ, ಪ್ರಧಾನಿ ಇಮ್ರಾನ್‌ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ಪ್ರತಿಪಕ್ಷಗಳು ಹೊಸ ಸರ್ಕಾರ ರಚನೆಯ ಆರಂಭಿಕ ಮಾತುಕತೆಗಳನ್ನು ಪೂರ್ಣಗೊಳಿಸಿವೆ. ಅಧ್ಯಕ್ಷ ಅಲ್ವಿ ಪದಚ್ಯುತಿಗೆ ಮತ್ತು ಬ್ರಿಟನ್‌ನಿಂದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಾಪಸಾತಿಗೆ ಯೋಜನೆಗಳು ನಡೆಯುತ್ತಿವೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

ನೂತನ ಪ್ರಧಾನಿಯಾಗಿ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ 70ರ ಹರೆಯದ ಶೆಹಬಾಜ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಸಂಭಾವ್ಯ ಸರ್ಕಾರದ ಆದ್ಯತೆಗಳನ್ನು ಪ್ರಕಟಿಸಲಿದ್ದಾರೆ. ಹೊಸ ಸಂಭವನೀಯ ಒಕ್ಕೂಟ ಸರ್ಕಾರದಲ್ಲಿ ಎಲ್ಲಾ ವಿರೋಧ ಪಕ್ಷಗಳಿಗೆ ಪ್ರಮಾಣಾನುಗುಣ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...