Homeಮುಖಪುಟವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

- Advertisement -
- Advertisement -

ಏರ್ ಇಂಡಿಯಾ ವಿಮಾನದಲ್ಲಿ ಸಸ್ಯಾಹಾರಿ ಜೈನ ಪ್ರಯಾಣಿಕರೊಬ್ಬರಿಗೆ ಮಾಂಸಾಹಾರಿ ಆಹಾರವನ್ನು ಬಡಿಸಿದ ಘಟನೆ ಬೆಳಕಿಗೆ ಬಂದ ನಂತರ, ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ಆಂತರಿಕ ವಿಮಾನಯಾನಗಳಲ್ಲಿ ಮಾಂಸಹಾರ ಊಟವನ್ನು ನಿಷೇಧಿಸುವಂತೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದಿವೆ.

“ಸಸ್ಯಾಹಾರಿ ಪ್ರಯಾಣಿಕರ ಪರವಾಗಿ ಈ ವಿನಂತಿಯನ್ನು ಮಾಡಲಾಗುತ್ತಿದೆ… ಕಟ್ಟುನಿಟ್ಟಾಗಿ ಸಸ್ಯಾಹಾರವನ್ನು ಪಾಲಿಸುವ ಪ್ರಯಾಣಿಕರು ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರಿ ಆಹಾರವನ್ನು ಪಡೆದಾಗ ಹೆಚ್ಚು ತೊಂದರೆ ಮತ್ತು ಅಸಮಾಧಾನಕ್ಕೆ ಒಳಗಾಗುತ್ತಾರೆ” ಎಂದು ಮಂಡಳಿಯ ಸದಸ್ಯ ರಾಜೇಂದ್ರ ಶಾ ಪತ್ರದಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯ ರಾಜೇಂದ್ರ ಶಾ, “ಕಟ್ಟುನಿಟ್ಟಾಗಿ ಸಸ್ಯಾಹಾರಿ ಪಾಲಿಸುವ ಜನರು, ಸಸ್ಯಾಹಾರಿ ಆಹಾರದ ಬದಲಿಗೆ ಇಂತಹ ಮಾಂಸಾಹಾರಿ ಆಹಾರವನ್ನು ಪಡೆದು ಮನನೊಂದಿದ್ದಾರೆ ಮತ್ತು ತೊಂದರೆ ಅನುಭವಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

ಟೋಕಿಯೊದಿಂದ ದೆಹಲಿಗೆ ತನ್ನ ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದ ರಾಘವೇಂದ್ರ ಜೈನ್‌ಗೆ ಆಕಸ್ಮಿಕವಾಗಿ ಮಾಂಸಾಹಾರಿ ಊಟವನ್ನು ಬಡಿಸಿದ್ದರಿಂದ ಜೈನ ಸಮುದಾಯ ವಿಮಾನಗಳಲ್ಲಿ ಮಾಂಸಹಾರವನ್ನು ನಿಷೇಧ ಮಾಡುವಂತೆ ಒತ್ತಾಯಿಸಿದೆ.

ಮಾರ್ಚ್ 25 ರಂದು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಸಿಬ್ಬಂದಿಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ತನಗೆ ಮಾಂಸಾಹಾರಿ ನೀಡಿದ್ದಾರೆ ಎಂದು ರಾಘವೇಂದ್ರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾನು ಸಸ್ಯಾಹಾರಿ ಆಹಾರವನ್ನು ಮೊದಲೇ ಬುಕ್ ಮಾಡಿದ್ದೆ ಮತ್ತು ಚೆಕ್-ಇನ್ ಕೌಂಟರ್‌ನಲ್ಲಿ ಅದನ್ನು ದೃಢಪಡಿಸಿದ್ದೆ ಎಂದು ಜೈನ್ ಹೇಳಿದ್ದಾರೆ. ಆದರೆ ಪುನರಾವರ್ತಿತ ದೃಢೀಕರಣದ ನಂತರವೂ ಸಿಬ್ಬಂದಿ ಅವರಿಗೆ ಮಾಂಸಾಹಾರಿ ಆಹಾರವನ್ನು ನೀಡಿದ್ದಾಗಿ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

ಅವರು ಸಿಬ್ಬಂದಿಯೊಂದಿಗೆ ಮರುಪರಿಶೀಲಿಸುವಂತೆ ಹೇಳಿದರೂ, ಅವರು ಅದನ್ನು ಮಾಂಸಾಹಾರಿ ಆಹಾರವಲ್ಲ, ಸಸ್ಯಾಹಾರಿ ಆಹಾರ ಎಂದು ಅವರಿಗೆ ಭರವಸೆ ನೀಡಿ ಅವರಿಗೆ ನೀಡಿದ್ದಾಗಿ ದೂರಿದ್ದಾರೆ. “ತಮ್ಮ ತಪ್ಪಿಗಾಗಿ ಸಿಬ್ಬಂದಿ ಕ್ಷಮೆಯಾಚಿಸಲಿಲ್ಲ, ವಾಸ್ತವವಾಗಿ, ಪ್ರಯಾಣದುದ್ದಕ್ಕೂ ನನಗೆ ಕಿರುಕುಳ ನೀಡಿದರು” ಎಂದು ಅವರು ಹೇಳಿದ್ದಾರೆ.

ಈ ಘಟನೆಯ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಏರ್ ಇಂಡಿಯಾದ ಟೋಕಿಯೊದಿಂದ ದೆಹಲಿ ವಿಮಾನದ ಸಿಬ್ಬಂದಿಗೆ ಹಾರಾಟವನ್ನು ನಿಷೇಧಿಸಲಾಗಿದೆ. ಆಹಾರವನ್ನು ಒತ್ತಾಯ ಮಾಡಿ ತಿನ್ನಿಸಿರುವ ವಿವಾದದ ನಡುವೆ ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ವಿಮಾನಗಳಲ್ಲಿ ಮಾಂಸದ ಊಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಪತ್ರವನ್ನು ಬರೆದಿದೆ.

ಹಿಂದಿನ ವಾರವಷ್ಟೆ, ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (SDMC) ನವರಾತ್ರಿ ಹಬ್ಬದ 9 ದಿನಗಳ ಕಾಲ ಪುರಸಭೆಯ ವ್ಯಾಪ್ತಿಯಲ್ಲಿರುವ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ, ಪೂರ್ವ ದೆಹಲಿ ಮೇಯರ್ ಶ್ಯಾಮ್ ಸುಂದರ್ ಅಗರ್ವಾಲ್ ಮತ್ತು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ಅವರು ನವರಾತ್ರಿಯಲ್ಲಿ ಮಾಂಸ ಮಾರಾಟ ಮಾಡದಂತೆ ಮತ್ತು ಅಂಗಡಿಗಳನ್ನು ಮುಚ್ಚುವಂತೆ ಮಾಂಸ ಮಾರಾಟಗಾರರಿಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....