Homeಮುಖಪುಟವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

- Advertisement -
- Advertisement -

ಏರ್ ಇಂಡಿಯಾ ವಿಮಾನದಲ್ಲಿ ಸಸ್ಯಾಹಾರಿ ಜೈನ ಪ್ರಯಾಣಿಕರೊಬ್ಬರಿಗೆ ಮಾಂಸಾಹಾರಿ ಆಹಾರವನ್ನು ಬಡಿಸಿದ ಘಟನೆ ಬೆಳಕಿಗೆ ಬಂದ ನಂತರ, ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ಆಂತರಿಕ ವಿಮಾನಯಾನಗಳಲ್ಲಿ ಮಾಂಸಹಾರ ಊಟವನ್ನು ನಿಷೇಧಿಸುವಂತೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದಿವೆ.

“ಸಸ್ಯಾಹಾರಿ ಪ್ರಯಾಣಿಕರ ಪರವಾಗಿ ಈ ವಿನಂತಿಯನ್ನು ಮಾಡಲಾಗುತ್ತಿದೆ… ಕಟ್ಟುನಿಟ್ಟಾಗಿ ಸಸ್ಯಾಹಾರವನ್ನು ಪಾಲಿಸುವ ಪ್ರಯಾಣಿಕರು ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರಿ ಆಹಾರವನ್ನು ಪಡೆದಾಗ ಹೆಚ್ಚು ತೊಂದರೆ ಮತ್ತು ಅಸಮಾಧಾನಕ್ಕೆ ಒಳಗಾಗುತ್ತಾರೆ” ಎಂದು ಮಂಡಳಿಯ ಸದಸ್ಯ ರಾಜೇಂದ್ರ ಶಾ ಪತ್ರದಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯ ರಾಜೇಂದ್ರ ಶಾ, “ಕಟ್ಟುನಿಟ್ಟಾಗಿ ಸಸ್ಯಾಹಾರಿ ಪಾಲಿಸುವ ಜನರು, ಸಸ್ಯಾಹಾರಿ ಆಹಾರದ ಬದಲಿಗೆ ಇಂತಹ ಮಾಂಸಾಹಾರಿ ಆಹಾರವನ್ನು ಪಡೆದು ಮನನೊಂದಿದ್ದಾರೆ ಮತ್ತು ತೊಂದರೆ ಅನುಭವಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

ಟೋಕಿಯೊದಿಂದ ದೆಹಲಿಗೆ ತನ್ನ ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದ ರಾಘವೇಂದ್ರ ಜೈನ್‌ಗೆ ಆಕಸ್ಮಿಕವಾಗಿ ಮಾಂಸಾಹಾರಿ ಊಟವನ್ನು ಬಡಿಸಿದ್ದರಿಂದ ಜೈನ ಸಮುದಾಯ ವಿಮಾನಗಳಲ್ಲಿ ಮಾಂಸಹಾರವನ್ನು ನಿಷೇಧ ಮಾಡುವಂತೆ ಒತ್ತಾಯಿಸಿದೆ.

ಮಾರ್ಚ್ 25 ರಂದು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಸಿಬ್ಬಂದಿಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ತನಗೆ ಮಾಂಸಾಹಾರಿ ನೀಡಿದ್ದಾರೆ ಎಂದು ರಾಘವೇಂದ್ರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾನು ಸಸ್ಯಾಹಾರಿ ಆಹಾರವನ್ನು ಮೊದಲೇ ಬುಕ್ ಮಾಡಿದ್ದೆ ಮತ್ತು ಚೆಕ್-ಇನ್ ಕೌಂಟರ್‌ನಲ್ಲಿ ಅದನ್ನು ದೃಢಪಡಿಸಿದ್ದೆ ಎಂದು ಜೈನ್ ಹೇಳಿದ್ದಾರೆ. ಆದರೆ ಪುನರಾವರ್ತಿತ ದೃಢೀಕರಣದ ನಂತರವೂ ಸಿಬ್ಬಂದಿ ಅವರಿಗೆ ಮಾಂಸಾಹಾರಿ ಆಹಾರವನ್ನು ನೀಡಿದ್ದಾಗಿ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

ಅವರು ಸಿಬ್ಬಂದಿಯೊಂದಿಗೆ ಮರುಪರಿಶೀಲಿಸುವಂತೆ ಹೇಳಿದರೂ, ಅವರು ಅದನ್ನು ಮಾಂಸಾಹಾರಿ ಆಹಾರವಲ್ಲ, ಸಸ್ಯಾಹಾರಿ ಆಹಾರ ಎಂದು ಅವರಿಗೆ ಭರವಸೆ ನೀಡಿ ಅವರಿಗೆ ನೀಡಿದ್ದಾಗಿ ದೂರಿದ್ದಾರೆ. “ತಮ್ಮ ತಪ್ಪಿಗಾಗಿ ಸಿಬ್ಬಂದಿ ಕ್ಷಮೆಯಾಚಿಸಲಿಲ್ಲ, ವಾಸ್ತವವಾಗಿ, ಪ್ರಯಾಣದುದ್ದಕ್ಕೂ ನನಗೆ ಕಿರುಕುಳ ನೀಡಿದರು” ಎಂದು ಅವರು ಹೇಳಿದ್ದಾರೆ.

ಈ ಘಟನೆಯ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಏರ್ ಇಂಡಿಯಾದ ಟೋಕಿಯೊದಿಂದ ದೆಹಲಿ ವಿಮಾನದ ಸಿಬ್ಬಂದಿಗೆ ಹಾರಾಟವನ್ನು ನಿಷೇಧಿಸಲಾಗಿದೆ. ಆಹಾರವನ್ನು ಒತ್ತಾಯ ಮಾಡಿ ತಿನ್ನಿಸಿರುವ ವಿವಾದದ ನಡುವೆ ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ವಿಮಾನಗಳಲ್ಲಿ ಮಾಂಸದ ಊಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಪತ್ರವನ್ನು ಬರೆದಿದೆ.

ಹಿಂದಿನ ವಾರವಷ್ಟೆ, ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (SDMC) ನವರಾತ್ರಿ ಹಬ್ಬದ 9 ದಿನಗಳ ಕಾಲ ಪುರಸಭೆಯ ವ್ಯಾಪ್ತಿಯಲ್ಲಿರುವ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ, ಪೂರ್ವ ದೆಹಲಿ ಮೇಯರ್ ಶ್ಯಾಮ್ ಸುಂದರ್ ಅಗರ್ವಾಲ್ ಮತ್ತು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ಅವರು ನವರಾತ್ರಿಯಲ್ಲಿ ಮಾಂಸ ಮಾರಾಟ ಮಾಡದಂತೆ ಮತ್ತು ಅಂಗಡಿಗಳನ್ನು ಮುಚ್ಚುವಂತೆ ಮಾಂಸ ಮಾರಾಟಗಾರರಿಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...