Homeಕರ್ನಾಟಕಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು. ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದಿದ್ದಾರೆ.

- Advertisement -
- Advertisement -

ಅಧಿಕಾರ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರಕ್ಕಾಗಿ ಯಾವುದೇ ದುರಾಸೆ ಇಲ್ಲ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂವಿಧಾನಿಕ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಕೆ.ರಾಜು ಸಂಪಾದಿಸಿರುವ ಪ್ರಬಂಧಗಳ ಸಂಗ್ರಹವನ್ನು ಜವಾಹರ ಭವನದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರದ ಹುಡುಕಾಟದಲ್ಲಿ ನಿರಂತರವಾಗಿ ಇರುವ ರಾಜಕಾರಣಿಗಳಿದ್ದಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ಅದರ ಮೇಲೆ ನನಗೆ ಆಸಕ್ತಿಯಿಲ್ಲ. ನಾನು ಜನರನ್ನು ಮತ್ತು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಈ ಪ್ರಕ್ರಿಯೆಯಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿ ಇರುವ ವಿಶ್ವದ ಏಕೈಕ ದೇಶ ಭಾರತ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ವಿಷಾದಿಸಿದ್ದಾರೆ.

ಜನರಿಂದ ಸಿಗುತ್ತಿರುವ ನಿರಂತರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ರಾಹುಲ್ ಗಾಂಧಿ, “ನನ್ನ ದೇಶವು ನನ್ನನ್ನು ಬೇಷರತ್ತಾಗಿ ಪ್ರೀತಿಸಿದೆ. ಅದಕ್ಕಾಗಿ ನಾನು ಶಾಶ್ವತವಾಗಿ ಋಣಿಯಾಗಿದ್ದೇನೆ” ಎಂದಿದ್ದಾರೆ.

ಜನರು ಒಂದು ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿರುವುದರಿಂದ ಮಾತ್ರ ಗುರಿಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, “ಬೇರೆ ಜಾತಿ ಅಥವಾ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮುಗ್ಧ ಜನರ ಮೇಲೆ ಹಲ್ಲೆ ಮಾಡಿದ ಸಂದರ್ಭಗಳನ್ನು ನಾನು ನೋಡಿದ್ದೇನೆ. ದೇಶದಲ್ಲಿ ದಲಿತರಿಗೆ ಈ ಅನ್ಯಾಯವಾಗುತ್ತಿದೆ” ಎಂದಿದ್ದಾರೆ.

ಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದೆ ಅದು ಅರ್ಥಹೀನವಾಗಿದೆ ಎಂದಿರುವ ರಾಹುಲ್‌ ಗಾಂಧಿ, “ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ” ಎಂದು ದೂರಿದ್ದಾರೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಹಾದಿಯಲ್ಲಿ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಎಚ್ಚರಿಸಿರುವ ಅವರು, “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಸಂಸ್ಥೆಗಳ ಜೊತೆಯಲ್ಲಿ ಹೇಗೆ ಜಾರಿಗೆ ತರಲಾಗುತ್ತದೆ? ಎಲ್ಲಾ ಸಂಸ್ಥೆಗಳು ಆರ್‌ಎಸ್‌ಎಸ್ ಕೈಯಲ್ಲಿವೆ” ಎಂದಿದ್ದಾರೆ.

“ಇದು ಹೊಸ ದಾಳಿಯಲ್ಲ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ದಿನದಿಂದಲೂ ಪ್ರಾರಂಭವಾಯಿತು” ಎಂದು ತಿಳಿಸಿದ್ದಾರೆ.

“ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜನರಿಗೆ ಅಸ್ತ್ರವನ್ನು ನೀಡಿದರು. ಆದರೆ ಇಂದು ಆ ಅಸ್ತ್ರಕ್ಕೆ ಅರ್ಥವಿಲ್ಲ. ಏಕೆಂದರೆ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ರಾಜಕೀಯ ನಾಯಕರನ್ನು ನಿಯಂತ್ರಿಸಲು ಸ್ಪೈವೇರ್ (ಪೆಗಾಸಸ್) ಬಳಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ಹಣವನ್ನು ತೆಗೆದುಕೊಂಡಿದ್ದರೆ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸಿಬಿಐ ಮತ್ತು ಇಡಿ ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುತ್ತವೆ ಎಂದು ಹೇಳಿದ್ದಾರೆ.

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು, ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ದಲಿತ ಧ್ವನಿಯನ್ನು ಉಚ್ಚರಿಸಿದ್ದಕ್ಕಾಗಿ ಕಾನ್ಶಿರಾಮ್ ಅವರ ಬಗ್ಗೆ ನನಗೆ ಗೌರವವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಇದರಿಂದಾಗಿ ಕಾಂಗ್ರೆಸ್ ನಷ್ಟವನ್ನು ಅನುಭವಿಸಿತು. ಮಾಯಾವತಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟ ಮಾರ್ಗವನ್ನು ತೋರಿದರು. ಅದಕ್ಕೆ ಕಾರಣ- ಸಿಬಿಐ, ಇಡಿ ಮತ್ತು ಪೆಗಾಸಸ್” ಎಂದು ದೂರಿದ್ದಾರೆ.

ಕೆ.ರಾಜು ಅವರು ತಮ್ಮ ಹೊಸ ಪುಸ್ತಕ “ದ ದಲಿತ್ ಟ್ರುತ್: ದಿ ಬ್ಯಾಟಲ್ ಫಾರ್ ರಿಯಲೈಸಿಂಗ್ ಅಂಬೇಡ್ಕರ್’ಸ್ ವಿಷನ್”ನಲ್ಲಿ ದಲಿತರ ಧ್ವನಿಯನ್ನು ಚಿತ್ರಿಸಲು ಪ್ರಯತ್ನಿಸಿದ್ದಾರೆ. ಇದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ‘ರೀಥಿಂಕಿಂಗ್ ಇಂಡಿಯಾ’ ಸರಣಿಯ ಎಂಟನೇ ಸಂಪುಟವಾಗಿದೆ.


ಇದನ್ನೂ ಓದಿರಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...