Homeಕರ್ನಾಟಕಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು. ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದಿದ್ದಾರೆ.

- Advertisement -
- Advertisement -

ಅಧಿಕಾರ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರಕ್ಕಾಗಿ ಯಾವುದೇ ದುರಾಸೆ ಇಲ್ಲ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂವಿಧಾನಿಕ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಕೆ.ರಾಜು ಸಂಪಾದಿಸಿರುವ ಪ್ರಬಂಧಗಳ ಸಂಗ್ರಹವನ್ನು ಜವಾಹರ ಭವನದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರದ ಹುಡುಕಾಟದಲ್ಲಿ ನಿರಂತರವಾಗಿ ಇರುವ ರಾಜಕಾರಣಿಗಳಿದ್ದಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ಅದರ ಮೇಲೆ ನನಗೆ ಆಸಕ್ತಿಯಿಲ್ಲ. ನಾನು ಜನರನ್ನು ಮತ್ತು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಈ ಪ್ರಕ್ರಿಯೆಯಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿ ಇರುವ ವಿಶ್ವದ ಏಕೈಕ ದೇಶ ಭಾರತ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ವಿಷಾದಿಸಿದ್ದಾರೆ.

ಜನರಿಂದ ಸಿಗುತ್ತಿರುವ ನಿರಂತರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ರಾಹುಲ್ ಗಾಂಧಿ, “ನನ್ನ ದೇಶವು ನನ್ನನ್ನು ಬೇಷರತ್ತಾಗಿ ಪ್ರೀತಿಸಿದೆ. ಅದಕ್ಕಾಗಿ ನಾನು ಶಾಶ್ವತವಾಗಿ ಋಣಿಯಾಗಿದ್ದೇನೆ” ಎಂದಿದ್ದಾರೆ.

ಜನರು ಒಂದು ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿರುವುದರಿಂದ ಮಾತ್ರ ಗುರಿಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, “ಬೇರೆ ಜಾತಿ ಅಥವಾ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮುಗ್ಧ ಜನರ ಮೇಲೆ ಹಲ್ಲೆ ಮಾಡಿದ ಸಂದರ್ಭಗಳನ್ನು ನಾನು ನೋಡಿದ್ದೇನೆ. ದೇಶದಲ್ಲಿ ದಲಿತರಿಗೆ ಈ ಅನ್ಯಾಯವಾಗುತ್ತಿದೆ” ಎಂದಿದ್ದಾರೆ.

ಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದೆ ಅದು ಅರ್ಥಹೀನವಾಗಿದೆ ಎಂದಿರುವ ರಾಹುಲ್‌ ಗಾಂಧಿ, “ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ” ಎಂದು ದೂರಿದ್ದಾರೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಹಾದಿಯಲ್ಲಿ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಎಚ್ಚರಿಸಿರುವ ಅವರು, “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಸಂಸ್ಥೆಗಳ ಜೊತೆಯಲ್ಲಿ ಹೇಗೆ ಜಾರಿಗೆ ತರಲಾಗುತ್ತದೆ? ಎಲ್ಲಾ ಸಂಸ್ಥೆಗಳು ಆರ್‌ಎಸ್‌ಎಸ್ ಕೈಯಲ್ಲಿವೆ” ಎಂದಿದ್ದಾರೆ.

“ಇದು ಹೊಸ ದಾಳಿಯಲ್ಲ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ದಿನದಿಂದಲೂ ಪ್ರಾರಂಭವಾಯಿತು” ಎಂದು ತಿಳಿಸಿದ್ದಾರೆ.

“ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜನರಿಗೆ ಅಸ್ತ್ರವನ್ನು ನೀಡಿದರು. ಆದರೆ ಇಂದು ಆ ಅಸ್ತ್ರಕ್ಕೆ ಅರ್ಥವಿಲ್ಲ. ಏಕೆಂದರೆ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ರಾಜಕೀಯ ನಾಯಕರನ್ನು ನಿಯಂತ್ರಿಸಲು ಸ್ಪೈವೇರ್ (ಪೆಗಾಸಸ್) ಬಳಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ಹಣವನ್ನು ತೆಗೆದುಕೊಂಡಿದ್ದರೆ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸಿಬಿಐ ಮತ್ತು ಇಡಿ ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುತ್ತವೆ ಎಂದು ಹೇಳಿದ್ದಾರೆ.

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು, ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ದಲಿತ ಧ್ವನಿಯನ್ನು ಉಚ್ಚರಿಸಿದ್ದಕ್ಕಾಗಿ ಕಾನ್ಶಿರಾಮ್ ಅವರ ಬಗ್ಗೆ ನನಗೆ ಗೌರವವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಇದರಿಂದಾಗಿ ಕಾಂಗ್ರೆಸ್ ನಷ್ಟವನ್ನು ಅನುಭವಿಸಿತು. ಮಾಯಾವತಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟ ಮಾರ್ಗವನ್ನು ತೋರಿದರು. ಅದಕ್ಕೆ ಕಾರಣ- ಸಿಬಿಐ, ಇಡಿ ಮತ್ತು ಪೆಗಾಸಸ್” ಎಂದು ದೂರಿದ್ದಾರೆ.

ಕೆ.ರಾಜು ಅವರು ತಮ್ಮ ಹೊಸ ಪುಸ್ತಕ “ದ ದಲಿತ್ ಟ್ರುತ್: ದಿ ಬ್ಯಾಟಲ್ ಫಾರ್ ರಿಯಲೈಸಿಂಗ್ ಅಂಬೇಡ್ಕರ್’ಸ್ ವಿಷನ್”ನಲ್ಲಿ ದಲಿತರ ಧ್ವನಿಯನ್ನು ಚಿತ್ರಿಸಲು ಪ್ರಯತ್ನಿಸಿದ್ದಾರೆ. ಇದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ‘ರೀಥಿಂಕಿಂಗ್ ಇಂಡಿಯಾ’ ಸರಣಿಯ ಎಂಟನೇ ಸಂಪುಟವಾಗಿದೆ.


ಇದನ್ನೂ ಓದಿರಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...