Homeಸಿನಿಮಾಕ್ರೀಡೆIPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು - ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ಸೋಲಿನ ಸುಳಿಯಲ್ಲಿವೆ.

- Advertisement -
- Advertisement -

2022ರ ಸಾಲಿನ ಐಪಿಲ್ ಆರಂಭಗೊಂಡಿದೆ. ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳ ಆಗಮನದೊಂದಿಗೆ ಕ್ರಿಕೆಟ್ ಮೆರಗು ಮತ್ತಷ್ಟು ಹೆಚ್ಚಿದೆ. ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾಗಿದ್ದು, ಹಲವು ರೋಚಕ ಪಂದ್ಯಗಳನ್ನು ಅಭಿಮಾನಿಗಳು ಸವಿದಿದ್ದಾರೆ. ಈ ವರ್ಷದ ಐಪಿಎಲ್‌ನ ವಿಶೇಷತೆಯೆಂದರೆ ಹಲವು ಬಾರಿ ಚಾಂಪಿಯನ್ ಆಗಿರುವ ದಿಗ್ಗಜ ತಂಡಗಳು ಸತತವಾಗಿ ಮುಗ್ಗರಿಸುತ್ತಿದ್ದರೆ, ಹೊಸ ತಂಡಗಳು ಗೆಲುವಿನ ನಗೆ ಬೀರುತ್ತಿವೆ.

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿಯೂ ಸೋಲೊಪ್ಪಿಕೊಂಡಿವೆ. ಇದಕ್ಕೆ ತದ್ವಿರುದ್ಧವಾಗಿ ಹೊಸದಾಗಿ ಆಗಮಿಸಿದ ಗುಜರಾತ್ ಟೈಟನ್ಸ್ ತಂಡ ತಾನಾಡಿದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಜಯಿಸಿದೆ!.

ಸದ್ಯಕ್ಕೆ 4 ಪಂದ್ಯಗಳಲ್ಲಿ ಮೂರನ್ನು ಜಯಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲಿದ್ದರೆ, ಅಷ್ಟೇ ಅಂಕಗಳನ್ನು ಪಡೆದಿರುವ ಗುಜರಾತ್ ಟೈಟನ್ಸ್ ಎಡನೇ ಸ್ಥಾನ, ಆರ್‌ಸಿಬಿ ಮೂರನೇ ಸ್ಥಾನ ಮತ್ತು ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಎರಡು ಪಂದ್ಯ ಜಯಿಸಿರುವ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನ, ಪಂಜಾಬ್ ಕಿಂಗ್ಸ್ ಆರನೇ ಸ್ಥಾನ ಪಡೆದಿವೆ. ಒಂದು ಪಂದ್ಯ ಜಯಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಏಳನೇ ಸ್ಥಾನ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ಎಂಟನೇ ಸ್ಥಾನದಲ್ಲಿವೆ. ಒಂದೂ ಗೆಲುವು ಕಾಣದ ಮುಂಬೈ ಇಂಡಿಯನ್ಸ್ ಒಂಭತ್ತನೆ ಸ್ಥಾನದಲ್ಲಿದ್ದರೆ, ಚನ್ನೈ ಕೊನೆಯ ಸ್ಥಾನದಲ್ಲಿದೆ.

ಉತ್ತಮ ಆರಂಭ ಕಂಡ ಗುಜರಾತ್, ಲಕ್ನೋ

ಗುಜರಾತ್ ಟೈಟನ್ಸ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಉತ್ತಮ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೋವನ್ನು ಮಣಿಸಿ ಶುಭಾರಂಭ ಮಾಡಿದ ಅದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ತಿವಾಟಿಯ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಅದೇ ರೀತಿ ಮೊಹಮ್ಮದ್ ಶಮಿ, ರಶೀದ್ ಖಾನ್ ವಿಕೆಟ್ ಕಬಳಿಸುತ್ತಾ ತಂಡಕ್ಕೆ ಬೆನ್ನೆಲುಬಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದ್ದಾರೆ.

ಲಕ್ನೋ ತಂಡವು ಮೊದಲ ಪಂದ್ಯ ಸೋತ ನಂತರ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಅದ್ಭುತ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ. ಅವರೊಟ್ಟಿಗೆ ಕ್ವಿಂಟನ್ ಡಿ ಕಾಕ್, ಎವಿನ್ ಲೆವಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ. ಲಕ್ನೋ ಇಂದು ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣಸಲಿದೆ.

ಹೀನಾಯ ಸ್ಥಿತಿಯಲ್ಲಿ ಮುಂಬೈ ಮತ್ತು ಚನ್ನೈ

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಈ ಆವೃತ್ತಿಯಲ್ಲಿ ಗೆಲುವಿಗಾಗಿ ಪರಿತಪಿಸುತ್ತಿದೆ. ನಾಲ್ಕು ಪಂದ್ಯ ಆಡಿರುವ ಅದು ನಾಲ್ಕರಲ್ಲಿಯೂ ಸೋತಿದೆ. ಇಶಾಂತ್ ಕಿಶನ್, ಸೂರ್ಯಕುಮಾರ್ ಯಾದವ್‌ ಅದ್ಭುತ ಬ್ಯಾಟಿಂಗ್ ಆಡುತ್ತಿದ್ದರೂ, ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಸ್ಪ್ರಿತ್ ಬುಮ್ರ ಮತ್ತು ಪೊಲಾರ್ಡ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ತಂಡದ ಮೇಲೆ ಪರಿಣಾಮ ಬೀರಿದೆ. ಮುಂದಿನ ಪಂದ್ಯ ಏಪ್ರಿಲ್ 13 ರಂದು ಪಂಜಾಬ್ ಕಿಂಗ್ಸ್ ಎದುರು ಆಡಲಿದ್ದು, ಗೆಲುವಿನ ಲಯಕ್ಕೆ ಮರಳಬೇಕಿದೆ.

ಚನ್ನೈ ತಂಡವೂ ಒತ್ತಡದಲ್ಲಿದೆ. ತಂಡದ ಯಾವುದೇ ಬ್ಯಾಟ್ಸ್‌ಮನ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅನುಭವಿ ಆಟಗಾರರಿದ್ದರೂ ಉತ್ತರ ಪ್ರದರ್ಶನ ಬಾರದ ಕಾರಣ ಸತತ 4 ಸೋಲು ಕಂಡಿದೆ. ಮುಂದಿನ ಪಂದ್ಯ ಏಪ್ರಿಲ್ 12 ರಂದು ಆರ್‌ಸಿಬಿ ಎದುರು ಆಡಬೇಕಿದೆ. ಸತತ ಮೂರು ಗೆಲುವಿನೊಂದಿಗೆ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದ್ದರೆ ಚನ್ನೈಗೆ ಗೆಲುವು ಬೇಕೆ ಬೇಕಿದೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...