Homeಕರ್ನಾಟಕದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಕಾರ್ಯಕ್ರಮ ನಡೆಯಿತು.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಿತು. ʼಸ್ವಾತಂತ್ರ್ಯ ರಕ್ಷಣೆಗಾಗಿ, ಸ್ವಸ್ಥ ಸೌಹಾರ್ದಯುತ ಸಮಾಜಕ್ಕಾಗಿʼ ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಡೆಗೆಯುದ್ಧಕ್ಕೂ ಕೋಮುವಾದಿ ಸರ್ಕಾರಕ್ಕೆ, ಮನುವಾದಕ್ಕೆ ಧಿಕ್ಕಾರ ಕೂಗಲಾಯಿತು. ದೊರೆಸ್ವಾಮಿಯವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು, ʼರಘುಪತಿ ರಾಘವ ರಾಜಾ ರಾಮ್‌…ʼ ಭಜನೆ ಮಾಡುತ್ತ ಹೋರಾಟಗಾರರು ಹೆಜ್ಜೆಹಾಕಿದರು. ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿರುವುದನ್ನು ಖಂಡಿಸಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡಲು ದೊರೆಸ್ವಾಮಿ ಅವರು ನಮಗೆಲ್ಲ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು” ಎಂದು ಹೇಳಿದರು.

“ಸಮಾಜದ ಪ್ರತಿ ಪಿಡುಗಿಗೂ ದೊರೆಸ್ವಾಮಿ ಅವರು ಹೋರಾಟ ನಡೆಸುತ್ತ ಬಂದರು. ಅವರ ಆದರ್ಶಮಯ ಜೀವನ ನಮ್ಮ ಮುಂದಿದೆ. ಅವರ ಬದುಕೇ ನಮಗೆಲ್ಲ ಮಾದರಿ. ಅವರ ಆಶಯಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರ್‌ ಮಾತನಾಡಿ, “ದೊರೆಸ್ವಾಮಿ ಅವರು ನಿಸ್ವಾರ್ಥ ಜೀವಿಯಾಗಿದ್ದರು. ಅವರ ಅಣ್ಣ ಮೇಯರ್‌ ಆಗಿದ್ದರೂ ಜೀವನದ ಕೊನೆವರೆಗೂ ಅವರು ಬಾಡಿಗೆ ಮನೆಯಲ್ಲೇ ವಾಸವಿದ್ದರು. ಇದು ದೊರೆಸ್ವಾಮಿ ಅವರ ಸರಳತೆಗೆ ಸಾಕ್ಷಿ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತೆ ವಿಜಯಮ್ಮ ಮಾತನಾಡಿ, “ಜೆ ಎಚ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ʼಸೌಂದರ್ಯ ಸ್ಪರ್ಧೆʼ ನಡೆದಿತ್ತು. ಆ ಸ್ಪರ್ಧೆ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಆದರೆ ಮುಖ್ಯಮಂತ್ರಿಗಳು ಸೌಂದರ್ಯ ಸ್ಪರ್ಧೆಯನ್ನು ನಡೆಸುವ ಪಟ್ಟು ಹಿಡಿದಿದ್ದರು. ಆ ವೇಳೆ ದೊರೆಸ್ವಾಮಿ ಅವರು ಪಟೇಲರ ಧೋರಣೆ ವಿರೋಧಿಸಿ, ʼನೀವು ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಬೇಕಾದರೆ ಸ್ಪರ್ಧೆಗೆ ಕಳುಹಿಸಿ, ಆದರೆ ನಾವು ಇಂತಹದ್ದನ್ನು ಒಪ್ಪುವುದಿಲ್ಲʼ ಎಂದು ನೇರವಾಗಿ ಹೇಳಿದ್ದರು. ಅದು ದೊರೆಸ್ವಾಮಿ ಅವರ ನೇರ- ನಿಷ್ಠುರತೆ” ಎಂದು ಸ್ಮರಿಸಿದರು.

ಪ್ರೊ. ನಗರಗೆರೆ ರಮೇಶ್‌ ಮಾತನಾಡಿ, “ರಾಜ್ಯದಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಜಾನಪದ ಜಾತ್ರೆ ಈಗ ಸಂಘಪರಿವಾರದ ಜಾತ್ರೆಯಾಗಿ ಮಾರ್ಪಟ್ಟಿದೆ. ಬಿಜೆಪಿಯಂಥ ಕೆಟ್ಟ ಸರ್ಕಾರ ಕಿತ್ತೆಸೆಯುವುದೇ ದೊರೆಸ್ವಾಮಿ ಅವರ ಆಶಯವಾಗಿತ್ತು” ಎಂದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿ ಕುಮಾರ ಸಮತಳ ಮಾತನಾಡಿ, “ದೊರೆಸ್ವಾಮಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಅನುಭವವೇ ನಮಗೆ ದೊಡ್ಡ ಪಾಠ. ಭೂಮಿ ಮತ್ತು ವಸತಿರಹಿತರ ಹಕ್ಕಿಗಾಗಿ ದೊರೆಸ್ವಾಮಿ ಸದಾಕಾಲ ಹೋರಾಡುತ್ತ ಬಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್‌ ಮಾತನಾಡಿ, “ರಾಜ್ಯದಲ್ಲಿ ಮನುವಾದಿ ಸಂಸ್ಕೃತಿ ಹೆಚ್ಚುತ್ತಿದೆ. ದೊರೆಸ್ವಾಮಿ ಬದುಕಿದ್ದರೆ ಆರ್‌ಎಸ್‌ಎಸ್‌ ನಡೆಗಳನ್ನು ನಿತ್ಯ ಖಂಡಿಸುತ್ತಿದ್ದರು. ರೈತರು ಮತ್ತು ಬಡವರ ಬಗ್ಗೆ ಸದಾಕಾಲ ಪ್ರೀತಿ ಇಟ್ಟುಕೊಂಡು, ಅವರ ಹಕ್ಕಿಗಾಗಿ ಧ್ವನಿ ಎತ್ತುತ್ತಲೇ ಬಂದವರು. ಯಾವ ಮುಲಾಜಿಲ್ಲದೇ ಎಂಥ ದೊಡ್ಡ ನಾಯಕಾದರೂ ಸರಿ, ನೀ ಮಾಡಿದ್ದು ತಪ್ಪು ಅಂತ ಹೇಳುವ ಧೈರ್ಯ ದೊರೆಸ್ವಾಮಿ ಅವರಿಗಿತ್ತು” ಎಂದು ಮೆಲುಕುಹಾಕಿದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿಗಳಾದ ಸಿರಿಮನೆ ನಾಗರಾಜ್‌, ಗೌರಿ, ಜಗನ್‌, ಗಜೇಂದ್ರ, ಎಚ್‌ ಎಂ ವೆಂಕಟೇಶ, ಪ್ರಭಾ ಬೆಳವಂಗಲ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಮೈಕೆಲ್ ಫರ್ನಾಂಡೀಸ್‌ ಮೊದಲಾದವರು ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...