Homeಕರ್ನಾಟಕದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಕಾರ್ಯಕ್ರಮ ನಡೆಯಿತು.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಿತು. ʼಸ್ವಾತಂತ್ರ್ಯ ರಕ್ಷಣೆಗಾಗಿ, ಸ್ವಸ್ಥ ಸೌಹಾರ್ದಯುತ ಸಮಾಜಕ್ಕಾಗಿʼ ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಡೆಗೆಯುದ್ಧಕ್ಕೂ ಕೋಮುವಾದಿ ಸರ್ಕಾರಕ್ಕೆ, ಮನುವಾದಕ್ಕೆ ಧಿಕ್ಕಾರ ಕೂಗಲಾಯಿತು. ದೊರೆಸ್ವಾಮಿಯವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು, ʼರಘುಪತಿ ರಾಘವ ರಾಜಾ ರಾಮ್‌…ʼ ಭಜನೆ ಮಾಡುತ್ತ ಹೋರಾಟಗಾರರು ಹೆಜ್ಜೆಹಾಕಿದರು. ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿರುವುದನ್ನು ಖಂಡಿಸಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡಲು ದೊರೆಸ್ವಾಮಿ ಅವರು ನಮಗೆಲ್ಲ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು” ಎಂದು ಹೇಳಿದರು.

“ಸಮಾಜದ ಪ್ರತಿ ಪಿಡುಗಿಗೂ ದೊರೆಸ್ವಾಮಿ ಅವರು ಹೋರಾಟ ನಡೆಸುತ್ತ ಬಂದರು. ಅವರ ಆದರ್ಶಮಯ ಜೀವನ ನಮ್ಮ ಮುಂದಿದೆ. ಅವರ ಬದುಕೇ ನಮಗೆಲ್ಲ ಮಾದರಿ. ಅವರ ಆಶಯಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರ್‌ ಮಾತನಾಡಿ, “ದೊರೆಸ್ವಾಮಿ ಅವರು ನಿಸ್ವಾರ್ಥ ಜೀವಿಯಾಗಿದ್ದರು. ಅವರ ಅಣ್ಣ ಮೇಯರ್‌ ಆಗಿದ್ದರೂ ಜೀವನದ ಕೊನೆವರೆಗೂ ಅವರು ಬಾಡಿಗೆ ಮನೆಯಲ್ಲೇ ವಾಸವಿದ್ದರು. ಇದು ದೊರೆಸ್ವಾಮಿ ಅವರ ಸರಳತೆಗೆ ಸಾಕ್ಷಿ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತೆ ವಿಜಯಮ್ಮ ಮಾತನಾಡಿ, “ಜೆ ಎಚ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ʼಸೌಂದರ್ಯ ಸ್ಪರ್ಧೆʼ ನಡೆದಿತ್ತು. ಆ ಸ್ಪರ್ಧೆ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಆದರೆ ಮುಖ್ಯಮಂತ್ರಿಗಳು ಸೌಂದರ್ಯ ಸ್ಪರ್ಧೆಯನ್ನು ನಡೆಸುವ ಪಟ್ಟು ಹಿಡಿದಿದ್ದರು. ಆ ವೇಳೆ ದೊರೆಸ್ವಾಮಿ ಅವರು ಪಟೇಲರ ಧೋರಣೆ ವಿರೋಧಿಸಿ, ʼನೀವು ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಬೇಕಾದರೆ ಸ್ಪರ್ಧೆಗೆ ಕಳುಹಿಸಿ, ಆದರೆ ನಾವು ಇಂತಹದ್ದನ್ನು ಒಪ್ಪುವುದಿಲ್ಲʼ ಎಂದು ನೇರವಾಗಿ ಹೇಳಿದ್ದರು. ಅದು ದೊರೆಸ್ವಾಮಿ ಅವರ ನೇರ- ನಿಷ್ಠುರತೆ” ಎಂದು ಸ್ಮರಿಸಿದರು.

ಪ್ರೊ. ನಗರಗೆರೆ ರಮೇಶ್‌ ಮಾತನಾಡಿ, “ರಾಜ್ಯದಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಜಾನಪದ ಜಾತ್ರೆ ಈಗ ಸಂಘಪರಿವಾರದ ಜಾತ್ರೆಯಾಗಿ ಮಾರ್ಪಟ್ಟಿದೆ. ಬಿಜೆಪಿಯಂಥ ಕೆಟ್ಟ ಸರ್ಕಾರ ಕಿತ್ತೆಸೆಯುವುದೇ ದೊರೆಸ್ವಾಮಿ ಅವರ ಆಶಯವಾಗಿತ್ತು” ಎಂದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿ ಕುಮಾರ ಸಮತಳ ಮಾತನಾಡಿ, “ದೊರೆಸ್ವಾಮಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಅನುಭವವೇ ನಮಗೆ ದೊಡ್ಡ ಪಾಠ. ಭೂಮಿ ಮತ್ತು ವಸತಿರಹಿತರ ಹಕ್ಕಿಗಾಗಿ ದೊರೆಸ್ವಾಮಿ ಸದಾಕಾಲ ಹೋರಾಡುತ್ತ ಬಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್‌ ಮಾತನಾಡಿ, “ರಾಜ್ಯದಲ್ಲಿ ಮನುವಾದಿ ಸಂಸ್ಕೃತಿ ಹೆಚ್ಚುತ್ತಿದೆ. ದೊರೆಸ್ವಾಮಿ ಬದುಕಿದ್ದರೆ ಆರ್‌ಎಸ್‌ಎಸ್‌ ನಡೆಗಳನ್ನು ನಿತ್ಯ ಖಂಡಿಸುತ್ತಿದ್ದರು. ರೈತರು ಮತ್ತು ಬಡವರ ಬಗ್ಗೆ ಸದಾಕಾಲ ಪ್ರೀತಿ ಇಟ್ಟುಕೊಂಡು, ಅವರ ಹಕ್ಕಿಗಾಗಿ ಧ್ವನಿ ಎತ್ತುತ್ತಲೇ ಬಂದವರು. ಯಾವ ಮುಲಾಜಿಲ್ಲದೇ ಎಂಥ ದೊಡ್ಡ ನಾಯಕಾದರೂ ಸರಿ, ನೀ ಮಾಡಿದ್ದು ತಪ್ಪು ಅಂತ ಹೇಳುವ ಧೈರ್ಯ ದೊರೆಸ್ವಾಮಿ ಅವರಿಗಿತ್ತು” ಎಂದು ಮೆಲುಕುಹಾಕಿದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿಗಳಾದ ಸಿರಿಮನೆ ನಾಗರಾಜ್‌, ಗೌರಿ, ಜಗನ್‌, ಗಜೇಂದ್ರ, ಎಚ್‌ ಎಂ ವೆಂಕಟೇಶ, ಪ್ರಭಾ ಬೆಳವಂಗಲ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಮೈಕೆಲ್ ಫರ್ನಾಂಡೀಸ್‌ ಮೊದಲಾದವರು ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...