Homeಕರ್ನಾಟಕದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೊರೆಸ್ವಾಮಿಯವರೇ ನಮಗೆಲ್ಲ ಮಾದರಿ: ಸಾಮರಸ್ಯಕ್ಕೆ ಕರೆ ನೀಡಿದ ನಡಿಗೆ

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಕಾರ್ಯಕ್ರಮ ನಡೆಯಿತು.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಇಂದು (ಏ.10) ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಿತು. ʼಸ್ವಾತಂತ್ರ್ಯ ರಕ್ಷಣೆಗಾಗಿ, ಸ್ವಸ್ಥ ಸೌಹಾರ್ದಯುತ ಸಮಾಜಕ್ಕಾಗಿʼ ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಡೆಗೆಯುದ್ಧಕ್ಕೂ ಕೋಮುವಾದಿ ಸರ್ಕಾರಕ್ಕೆ, ಮನುವಾದಕ್ಕೆ ಧಿಕ್ಕಾರ ಕೂಗಲಾಯಿತು. ದೊರೆಸ್ವಾಮಿಯವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು, ʼರಘುಪತಿ ರಾಘವ ರಾಜಾ ರಾಮ್‌…ʼ ಭಜನೆ ಮಾಡುತ್ತ ಹೋರಾಟಗಾರರು ಹೆಜ್ಜೆಹಾಕಿದರು. ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿರುವುದನ್ನು ಖಂಡಿಸಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡಲು ದೊರೆಸ್ವಾಮಿ ಅವರು ನಮಗೆಲ್ಲ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು” ಎಂದು ಹೇಳಿದರು.

“ಸಮಾಜದ ಪ್ರತಿ ಪಿಡುಗಿಗೂ ದೊರೆಸ್ವಾಮಿ ಅವರು ಹೋರಾಟ ನಡೆಸುತ್ತ ಬಂದರು. ಅವರ ಆದರ್ಶಮಯ ಜೀವನ ನಮ್ಮ ಮುಂದಿದೆ. ಅವರ ಬದುಕೇ ನಮಗೆಲ್ಲ ಮಾದರಿ. ಅವರ ಆಶಯಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರ್‌ ಮಾತನಾಡಿ, “ದೊರೆಸ್ವಾಮಿ ಅವರು ನಿಸ್ವಾರ್ಥ ಜೀವಿಯಾಗಿದ್ದರು. ಅವರ ಅಣ್ಣ ಮೇಯರ್‌ ಆಗಿದ್ದರೂ ಜೀವನದ ಕೊನೆವರೆಗೂ ಅವರು ಬಾಡಿಗೆ ಮನೆಯಲ್ಲೇ ವಾಸವಿದ್ದರು. ಇದು ದೊರೆಸ್ವಾಮಿ ಅವರ ಸರಳತೆಗೆ ಸಾಕ್ಷಿ” ಎಂದು ಅಭಿಪ್ರಾಯಪಟ್ಟರು.

ಹಿರಿಯ ಪತ್ರಕರ್ತೆ ವಿಜಯಮ್ಮ ಮಾತನಾಡಿ, “ಜೆ ಎಚ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ʼಸೌಂದರ್ಯ ಸ್ಪರ್ಧೆʼ ನಡೆದಿತ್ತು. ಆ ಸ್ಪರ್ಧೆ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಆದರೆ ಮುಖ್ಯಮಂತ್ರಿಗಳು ಸೌಂದರ್ಯ ಸ್ಪರ್ಧೆಯನ್ನು ನಡೆಸುವ ಪಟ್ಟು ಹಿಡಿದಿದ್ದರು. ಆ ವೇಳೆ ದೊರೆಸ್ವಾಮಿ ಅವರು ಪಟೇಲರ ಧೋರಣೆ ವಿರೋಧಿಸಿ, ʼನೀವು ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಬೇಕಾದರೆ ಸ್ಪರ್ಧೆಗೆ ಕಳುಹಿಸಿ, ಆದರೆ ನಾವು ಇಂತಹದ್ದನ್ನು ಒಪ್ಪುವುದಿಲ್ಲʼ ಎಂದು ನೇರವಾಗಿ ಹೇಳಿದ್ದರು. ಅದು ದೊರೆಸ್ವಾಮಿ ಅವರ ನೇರ- ನಿಷ್ಠುರತೆ” ಎಂದು ಸ್ಮರಿಸಿದರು.

ಪ್ರೊ. ನಗರಗೆರೆ ರಮೇಶ್‌ ಮಾತನಾಡಿ, “ರಾಜ್ಯದಲ್ಲಿ ಕೋಮುವಾದ ವಿಜೃಂಭಿಸುತ್ತಿದೆ. ಜಾನಪದ ಜಾತ್ರೆ ಈಗ ಸಂಘಪರಿವಾರದ ಜಾತ್ರೆಯಾಗಿ ಮಾರ್ಪಟ್ಟಿದೆ. ಬಿಜೆಪಿಯಂಥ ಕೆಟ್ಟ ಸರ್ಕಾರ ಕಿತ್ತೆಸೆಯುವುದೇ ದೊರೆಸ್ವಾಮಿ ಅವರ ಆಶಯವಾಗಿತ್ತು” ಎಂದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿ ಕುಮಾರ ಸಮತಳ ಮಾತನಾಡಿ, “ದೊರೆಸ್ವಾಮಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರ ಅನುಭವವೇ ನಮಗೆ ದೊಡ್ಡ ಪಾಠ. ಭೂಮಿ ಮತ್ತು ವಸತಿರಹಿತರ ಹಕ್ಕಿಗಾಗಿ ದೊರೆಸ್ವಾಮಿ ಸದಾಕಾಲ ಹೋರಾಡುತ್ತ ಬಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್‌ ಮಾತನಾಡಿ, “ರಾಜ್ಯದಲ್ಲಿ ಮನುವಾದಿ ಸಂಸ್ಕೃತಿ ಹೆಚ್ಚುತ್ತಿದೆ. ದೊರೆಸ್ವಾಮಿ ಬದುಕಿದ್ದರೆ ಆರ್‌ಎಸ್‌ಎಸ್‌ ನಡೆಗಳನ್ನು ನಿತ್ಯ ಖಂಡಿಸುತ್ತಿದ್ದರು. ರೈತರು ಮತ್ತು ಬಡವರ ಬಗ್ಗೆ ಸದಾಕಾಲ ಪ್ರೀತಿ ಇಟ್ಟುಕೊಂಡು, ಅವರ ಹಕ್ಕಿಗಾಗಿ ಧ್ವನಿ ಎತ್ತುತ್ತಲೇ ಬಂದವರು. ಯಾವ ಮುಲಾಜಿಲ್ಲದೇ ಎಂಥ ದೊಡ್ಡ ನಾಯಕಾದರೂ ಸರಿ, ನೀ ಮಾಡಿದ್ದು ತಪ್ಪು ಅಂತ ಹೇಳುವ ಧೈರ್ಯ ದೊರೆಸ್ವಾಮಿ ಅವರಿಗಿತ್ತು” ಎಂದು ಮೆಲುಕುಹಾಕಿದರು.

ಕರ್ನಾಟಕ ಜನಶಕ್ತಿ ವೇದಿಕೆ ಪದಾಧಿಕಾರಿಗಳಾದ ಸಿರಿಮನೆ ನಾಗರಾಜ್‌, ಗೌರಿ, ಜಗನ್‌, ಗಜೇಂದ್ರ, ಎಚ್‌ ಎಂ ವೆಂಕಟೇಶ, ಪ್ರಭಾ ಬೆಳವಂಗಲ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಮೈಕೆಲ್ ಫರ್ನಾಂಡೀಸ್‌ ಮೊದಲಾದವರು ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...