Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...