Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...