Homeಕರ್ನಾಟಕಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದ ಶ್ರೀರಾಮಸೇನೆಯ ದುಷ್ಕರ್ಮಿಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶ್ರೀರಾಮಸೇನೆಯ ಗೂಂಡಾಗಳು ನಬಿಸಾಬ್‌ ಅವರಿಗೆ ಸೇರಿದ ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿರುವ ಪ್ರಕರಣದಲ್ಲಿ ಹಲವು ದುಷ್ಕರ್ಮಿಗಳ ವಿರುದ್ದ FIR ದಾಖಲಿಸಲಾಗಿದೆ.

ಬಂಧಿತ ದುಷ್ಕರ್ಮಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ, ಕುಮಾರ ಕಟ್ಟಿಮನಿ ಎಂದು ಗುರುತಿಸಲಾಗಿದೆ. ನಬಿಸಾಬ್ ಅವರು ನೀಡಿದ ದೂರಿನ ಅನ್ವಯ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ ವಿಕೃತಿ ಮೆರೆದಿದ್ದರು.

ಇದನ್ನೂ ಓದಿ: ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಘಟನೆ ನಡೆದ ದಿನ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದರು.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದ್ದೆ. ಒಂದು ಕಿಂಟ್ವಾಲ್ ಮಾತ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದರು.

ದುಷ್ಕರ್ಮಿಗಳ ಈ ಕೃತ್ಯಕ್ಕೆ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಲವಾರು ಜನರು ನಬಿಸಾಬ್ ಅವರಿಗೆ ಮಿಡಿದಿದ್ದರು.

ಸೋಮವಾರದಂದು ಧಾರವಾಡ ಜಿಲ್ಲಾ ಕಚೇರಿಯ ಮುಂದೆ ಜನಪರ ಸಂಘಟನೆಗಳ ವೇದಿಕೆಯ ವತಿಯಿಂದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಸಂತ್ರಸ್ಥರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯಿತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...