Homeಕರ್ನಾಟಕಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದ ಶ್ರೀರಾಮಸೇನೆಯ ದುಷ್ಕರ್ಮಿಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶ್ರೀರಾಮಸೇನೆಯ ಗೂಂಡಾಗಳು ನಬಿಸಾಬ್‌ ಅವರಿಗೆ ಸೇರಿದ ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿರುವ ಪ್ರಕರಣದಲ್ಲಿ ಹಲವು ದುಷ್ಕರ್ಮಿಗಳ ವಿರುದ್ದ FIR ದಾಖಲಿಸಲಾಗಿದೆ.

ಬಂಧಿತ ದುಷ್ಕರ್ಮಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ, ಕುಮಾರ ಕಟ್ಟಿಮನಿ ಎಂದು ಗುರುತಿಸಲಾಗಿದೆ. ನಬಿಸಾಬ್ ಅವರು ನೀಡಿದ ದೂರಿನ ಅನ್ವಯ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ ವಿಕೃತಿ ಮೆರೆದಿದ್ದರು.

ಇದನ್ನೂ ಓದಿ: ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಘಟನೆ ನಡೆದ ದಿನ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದರು.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದ್ದೆ. ಒಂದು ಕಿಂಟ್ವಾಲ್ ಮಾತ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದರು.

ದುಷ್ಕರ್ಮಿಗಳ ಈ ಕೃತ್ಯಕ್ಕೆ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಲವಾರು ಜನರು ನಬಿಸಾಬ್ ಅವರಿಗೆ ಮಿಡಿದಿದ್ದರು.

ಸೋಮವಾರದಂದು ಧಾರವಾಡ ಜಿಲ್ಲಾ ಕಚೇರಿಯ ಮುಂದೆ ಜನಪರ ಸಂಘಟನೆಗಳ ವೇದಿಕೆಯ ವತಿಯಿಂದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಸಂತ್ರಸ್ಥರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯಿತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...