Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...