Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...