Homeಕರ್ನಾಟಕಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

- Advertisement -
- Advertisement -

“ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲದಿದ್ದರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿನ ಕೋಮುದ್ವೇಷ ಬೆಳವಣಿಗೆಗಳನ್ನು ಖಂಡಿಸಿರುವ ಅವರು, ಖಡಕ್‌ ಎಚ್ಚರಿಕೆ ನೀಡಿದ್ದಾರೆ. ‘ಧರ್ಮ ಸಂಘರ್ಷ’ ಹಾಗೂ ನುಗ್ಗಿಕೇರಿ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಆಸೆ. ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

“ಯಾರಾದರೂ ನಮ್ಮ ಸಹಬಾಳ್ವೆಗೆ ಅಡ್ಡಿ ಮಾಡುವಂತಹ ಪ್ರಯತ್ನ ಮಾಡಿದರೆ, ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆಯಾದರೂ ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದ್ದಾರೆ.

“ಈಗಾಗಲೇ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟಿದ್ದಾರೆ. ಇಂತಹ ಘಟನೆಗಳನ್ನ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಾನೂ ಕೂಡ ಕಿವಿಮಾತು ಹೇಳುತ್ತಿದ್ದೇನೆ. ಇಲ್ಲಿಗೆ ಎಲ್ಲವನ್ನೂ ನಿಲ್ಲಿಸಿ, ನಿಮ್ಮ-ನಿಮ್ಮ ಕೆಲಸ ಮಾಡಿ. ಎಲ್ಲರೂ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಮತೀಯ ಸಂಘಟನೆಗಳು ಸಂಘರ್ಷವನ್ನು ಉಂಟು ಮಾಡುತ್ತಿರುವ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪನವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪನವರು ಇಳಿದ ಬಳಿಕ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಿತು. ಬೊಮ್ಮಾಯಿಯವರು ಯಡಿಯೂರಪ್ಪನವರ ಆಪ್ತರಾದ ಕಾರಣ, ನಿಜವಾದ ಸಿಎಂ ಯಡಿಯೂರಪ್ಪನವರೇ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಬೊಮ್ಮಾಯಿಯವರು ಸಮಾಜವಾದಿ ಹಿನ್ನೆಲೆಯವರಾಗಿದ್ದು, ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ಭಾವಿಸಲಾಗಿತ್ತು. ದುರಾದೃಷ್ಟವಶಾತ್‌ ಬೊಮ್ಮಾಯಿಯವರ ಅವಧಿಯಲ್ಲಿ ಹಲವಾರು ಕೋಮುದ್ವೇಷ ಪ್ರಕರಣಗಳು ಘಟಿಸಿವೆ. ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ್ದು ಟೀಕೆಗೆ ಒಳಗಾಗಿದೆ.

ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಪರಿಸ್ಥಿತಿ ಇಷ್ಟು ದುಸ್ಥಿತಿಗೆ ಇಳಿಯುತ್ತಿರಲಿಲ್ಲ ಎಂಬ ಅಭಿಪ್ರಾಯಗಳು ಮೂಡಿಬರುತ್ತಿವೆ. ಈಗ ಯಡಿಯೂರಪ್ಪನವರೇ ಮತೀಯ ಸಂಘಟನೆಗಳಿಗೆ ಕಡಿವಾಣ ಹಾಕುವ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ.


ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾನ್ಯ ಯೆಡಿಯೂರಪ್ಪ ನವರ ಮಾತು ಎಲ್ಲರೂ ಸ್ವಾಗತಿಸ ಬೇಕಾದುದ್ದೆ, ಈ ಮಾತು ಮುಖ್ಯಮಂತ್ರಿಗಳು ಹೇಳಬೇಕಿತ್ತು ಮತ್ತು ಕಠಿಣ ನಿರ್ಧಾರ ತೆಗೆದುಕೊಂಡು ಯಾರೇ ಕೋಮು ದ್ವೇಷ ಕದಡುವ ಪ್ರಯತ್ನ ಪಟ್ಟಿದ್ದಾರೆ ಅವರಿಗೆಲ್ಲ ದೇಶದ್ರೋಹ ಪ್ರಕರಣ ದಾಖಲಿಸಿ ಶಿಕ್ಷೆ ಕೊಡಬೇಕಿತ್ತು,
    ಮನುಷ್ಯ ಎಂದಿಗೂ ಮನುಷ್ಯತ್ವ ಮರೀಬಾರ್ದು
    ಜೈ ಹಿಂದ್
    ಜೈ ಕರ್ನಾಟಕ

  2. ಅಧಿಕಾರಕ್ಕಾಗಿ ಹಸಿದ ತೋಳದ ಕಾವಲಿನಲ್ಲಿರುವ ಜನತೆಗೆ ಬಿಡುಗಡೆ ಅಷ್ಟು ಸುಲಬದ್ದಲ್ಲ .

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...