Homeಅಂತರಾಷ್ಟ್ರೀಯನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ ಯುವ ಸ್ಪರ್ಧಿಯ ವಜಾ: ತನಿಖೆಗೆ ಆದೇಶ

ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ ಯುವ ಸ್ಪರ್ಧಿಯ ವಜಾ: ತನಿಖೆಗೆ ಆದೇಶ

- Advertisement -
- Advertisement -

ಭಾನುವಾರ ನಡೆದ ಕಾರ್ಟಿಂಗ್ ಸ್ಪರ್ಧೆಯ (ಚಿಕ್ಕ ಕಾರು ಚಲಾಯಿಸುವ ರೇಸ್) ಯುರೋಪಿಯನ್ ಜೂನಿಯರ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಜಯಗಳಿಸಿದ 15 ವರ್ಷದ ಯುವಕನೊಬ್ಬ ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿರುವ ಘಟನೆ ಸಂಭವಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಇಂಟರ್ನ್ಯಾಷನಲ್ ಆಟೋಮೊಬೈಲ್ ಫೆಡರೇಶನ್ (ಎಫ್‌ಐಎ) ತನಿಖೆ ನಡೆಸುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಷ್ಯಾ ಆಟಗಾರರನ್ನು ಬ್ಯಾನ್ ಮಾಡಿರುವ ಕಾರಣ ರಷ್ಯಾದ ಯುವ ಸ್ಪರ್ಧಿ ಆರ್ಟೆಮ್ ಸೆವೆರಿಯುಖಿನ್ ಈ ಚಾಂಪಿಯನ್‌ಶಿಪ್‌ನಲ್ಲಿ ಇಟಲಿ ಪರವಾನಗಿ ಅಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಜಯ ಗಳಿಸಿದ್ದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಮುಷ್ಟಿ ಬಿಗಿಹಿಡಿದು ಎದೆಗೆ ಗುದ್ದಿಕೊಂಡ ನಂತರ ಕೈ ಮುಂದೆ ಮಾಡಿ ನಾಜಿ ಶೈಲಿಯಲ್ಲಿ ಸೆಲ್ಯೂಟ್ ಮಾಡಿದ್ದ. ಅಲ್ಲದೆ ಎದುರಿಗಿರುವವನ್ನು ನೋಡುತ್ತ ನಗುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಆತನನ್ನು ಸ್ಪರ್ಧೆಯಿಂದ ವಜಾಗೊಳಿಸಿದ್ದಲ್ಲದೆ, ಯಾವ ಪ್ರಚೋದನೆಗೆ ಒಳಗಾಗಿ ಆತ ನಾಜಿ ಶೈಲಿ ಸೆಲ್ಯೂಟ್ ಮಾಡಿದ ಎಂದು ತನಿಖೆ ನಡೆಸಲಾಗುತ್ತಿದೆ.

ಸೆವೆರಿಯುಖಿನ್ ಪ್ರತಿನಿಧಿಸುವ ವಾರ್ಡ್ ರೇಸಿಂಗ್ ತಂಡವು ಆತನನ್ನು ವಜಾಗೊಳಿಸಿದೆ ಎಂದು ತಿಳಿಸಿದೆ. “ಆ ಚಾಲಕನ ವರ್ತನೆಗೆ ವಾರ್ಡ್ ರೇಸಿಂಗ್ ತಂಡವು ನಾಚಿಕೆಪಡುತ್ತದೆ. ನಾವು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ವಿರೋಧಿಸಿ ಪ್ರತಿ ಡ್ರೈವರ್‌ಗಳ ಹೆಲ್ಮೆಟ್ ಮೇಲೆ ಯುದ್ದ ಬೇಡ ಎಂಬ ಸ್ಟಿಕ್ಕರ್ ಅಂಟಿಸಿದ್ದೇವೆ. ಅಲ್ಲದೆ ನಮ್ಮ ತಂಡದೊಂದಿಗೆ ಉಕ್ರೇನ್‌ನ ಮೂರು ನಿರಾಶ್ರಿತ ಕುಟುಂಬಗಳು ಪ್ರಯಾಣ ಬೆಳೆಸಲು ಅನುವು ಮಾಡಿಕೊಟ್ಟಿದ್ದೇವೆ” ಎಂದು ಹೇಳಿಕೆ ನೀಡಿದೆ.

ವಿವಾದದ ಬಳಿಕ ವಿಡಿಯೋ ಮೂಲಕ ಕ್ಷಮೆ ಕೇಳಿರುವ ಯುವ ಸ್ಪರ್ಧಿ ಆರ್ಟೆಮ್ ಸೆವೆರಿಯುಖಿನ್, ಅದು ನಿಜವಾಗಿಯೂ ನಾಜಿ ಶೈಲಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. “ಬಹಳಷ್ಟು ಜನರು ಅದು ನಾಜಿ ಶೈಲಿ ಎಂಬು ಭಾವಿಸಿದ್ದಾರೆ, ಅದು ನಿಜವಲ್ಲ. ನಾನು ಎಂದಿಗೂ ನಾಜಿಸಂ ಅನ್ನು ಬೆಂಬಲಿಸುವುದಿಲ್ಲ. ನಾಜಿಸಂ ಮಾನವೀಯತೆಯ ವಿರುದ್ಧದ ಕೆಟ್ಟ ಅಪರಾಧಗಳಲ್ಲಿ ಒಂದು ಎಂದು ನಂಬಿದ್ದೇನೆ” ಎಂದಿದ್ದಾನೆ.

ನಾನು ಒಬ್ಬ ಮೂರ್ಖ ಎಂದು ನನಗೆ ಅರಿವಾಗಿದೆ. ಆ ಕೃತ್ಯಕ್ಕೆ ಶಿಕ್ಷ ಅನುಭವಿಸಲು ಸಿದ್ದನಿದ್ದೇನೆ. ಆದರೆ ನನ್ನ ಉದ್ದೇಶ ಕೆಟ್ಟದಾಗಿರಲಿಲ್ಲ ಎಂದು ಯುವ ಚಾಲಕ ತಿಳಿಸಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...