Homeಕರ್ನಾಟಕಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು

- Advertisement -
- Advertisement -

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಬಡ ವ್ಯಾಪಾರಿ ನಬಿಸಾಬ್ ಅವರ ಮೇಲೆ ಗೂಂಡಾಗಿರಿ ನಡೆಸಿ, ತಿನ್ನುವ ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಅಮಾನವೀಯಕೃತ್ಯ ಎಸಗಿರುವ ಶ್ರೀರಾಮಸೇನೆಯ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಗೂ ಮುನ್ನ ಬಹುತ್ವ ಕರ್ನಾಟಕ ವೇದಿಕೆಯಡಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು. ಹಿಂದೂ-ಮುಸ್ಲಿಂ ವ್ಯಾಪಾರಿಗಳು ಪರಸ್ಪರ ಸಹೋದರರು, ಕೋಮುವಾದಿ ಸಂಘಟನೆಗಳು ಹಾಗೂ ವ್ಯಕ್ತಿಗಳು ನಮ್ಮ ನಡುವಿನ ಸಾಮರಸ್ಯ ಕದಡಲು ಸಾಧ್ಯವಿಲ್ಲ ಎಂದು ಏಕತೆಯ ಸಂಕೇತ ಬಿಂಬಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಗಾರ ಅಶೋಕ ನಂಜಲದಿನ್ನಿ, “ಕೆಲವು ಕೋಮುವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳು ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರಿಗೆ ಧರ್ಮದ ನಶೆ ಏರಿಸಿ; ಇಲ್ಲ-ಸಲ್ಲದ ಕಪೋಲ ಕಲ್ಪಿತ ದುಷ್ಟ ವಿಚಾರಗಳನ್ನು ತಲೆಯಲ್ಲಿ ತುಂಬಿ, ಬಡ ಮುಸ್ಲಿಂ ಜನರ ಮೇಲೆ ಎತ್ತಿಕಟ್ಟಿ ಅವರ ಬದುಕನ್ನು ಹಾಳುಮಾಡುತ್ತಿದ್ದಾರೆ. ಇಂತವರಿಂದ ಪ್ರೇರೇಪಣೆಗೊಂಡು ದುಷ್ಕೃತ್ಯ ನಡೆಸಿದ ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರು ಜೈಲಿಗೆ ಹೋದರೆ ಬದುಕು ಬೀದಿಗೆ ಬೀಳುತ್ತದೆ. ಪರಸ್ಪರ ದಲಿತ, ಶೂದ್ರ ಹಾಗೂ ಹಿಂದುಳಿದ ವರ್ಗದವರನ್ನು ಮುಸ್ಲಿಂ ಸಮುದಾಯದವರ ಮೇಲೆ ಛೂ ಬಿಟ್ಟು ಇತ್ತ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಅವರ ಹಿಡನ್ ಅಜೆಂಡಾವಾಗಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಬಹುತ್ವ ವೇದಿಕೆಯ ಸಂಚಾಲಕ ನಾಗರಾಜ ಪೂಜಾರ್ ಮಾತನಾಡಿ, “ಕಳೆದ ಹಲವು ದಿನಗಳಲ್ಲಿ ರಾಜ್ಯಾದ್ಯಂತ ಕೋಮುಸಾಮರಸ್ಯ ಕದಡುವಂತಹ ದುಷ್ಕೃತ್ಯಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಗೃಹ ಸಚಿವರೇ ಬಹಿರಂಗವಾಗಿ ಕೋಮು ಸಂಘಟನೆಗಳ ಏಜೆಂಟರಂತೆ ಮಾತನಾಡುತ್ತಿದ್ದಾರೆ. ಇನ್ನು ಮುಖ್ಯಮಂತ್ರಿಗಳು ಈ ಹಿಂದೆಯೇ ಕ್ರಿಯೆಗೆ-ಪ್ರತಿಕ್ರಿಯೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮತೀಯವಾದ ಮತ್ತು ಮತೀಯವಾದಿಗಳನ್ನು ಬೆಂಬಲಿಸಿ ಸಂವಿಧಾನ ಮತ್ತು ನಾಡಿನ ಜನರಿಗೆ ದ್ರೋಹ ಬಗೆದಿದ್ದಾರೆ” ಎಂದು ಹೇಳಿದರು.

ಮನುಜಮತ ಬಳಗದ ಬಸವರಾಜ ಬಾದರ್ಲಿ ಮಾತನಾಡಿ, “ಕೋಮುವಾದಿ ಬಜರಂಗಿಗಳು ಬಡ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಬೀದಿ ಎಸೆದು ರೈತರಿಗೆ, ಅವರ ಶ್ರಮಕ್ಕೆ ಅವಮಾನ ಮಾಡಿದ್ದಾರೆ. ಶಾಂತಿ-ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ-ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಕೆಲ ಶಕ್ತಿಗಳು ಹವಣಿಸುತ್ತಿದ್ದು ಅದರ ಭಾಗವಾಗಿ ಈ ಘಟನೆ ನಡೆದಿದೆ” ಎಂದು ವಿಶ್ಲೇಷಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಮುಖಂಡ ರಾಮಯ್ಯ ಜವಳಗೇರಾ ಮಾತನಾಡಿ, “ಸಂಪೂರ್ಣ ಆಡಳಿತ ವೈಫಲ್ಯ ಕಂಡಿರುವ ಬಿಜೆಪಿ ಸರ್ಕಾರವು ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜಿತ ಕಾರ್ಯತಂತ್ರದಭಾಗವಾಗಿ ಜನರ ಮನಸ್ಸನ್ನು ದಿಕ್ಕು ತಪ್ಪಿಸಲು, ಕೋಮುವಾದಿ ಸಂಘಟನೆಗಳ ದುಷ್ಕೃತ್ಯಗಳಿಗೆ ಪ್ರೋತ್ಸಾಹಿಸುತ್ತಿರುವುದಲ್ಲದೇ ಧರ್ಮ/ ಧರ್ಮಗಳ ನಡುವೆ ಕೋಮುಗಲಭೆ ಸೃಷ್ಟಿಮಾಡಲು ಕೀಳುಮಟ್ಟಕ್ಕಿಳಿದು ಏನೆಲ್ಲಾ ಹುನ್ನಾರ ನಡೆಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವೆಂಕಟೇಶ ಗಿರಿಜಾಲಿ, ಮಂಜುನಾಥ ಗಾಂಧಿನಗರ, ಬಸವರಾಜ ಹಸಮಕಲ್, ಶಾಮೀದ್‌ಸಾಬ್ ಸಿದ್ರಾಂಪುರ, ಸೈಯ್ಯದ್ ಬಾಷಾ, ಹುಸೇನ್ ಬಾಷಾ, ಖಾಸಿಂಸಾಬ್, ಸಮ್ಮದ್ ಚೌದ್ರಿ, ಪಂಪಾಪತಿ, ಅರ್ಶದ್, ಎಂ.ಎಡಿ.ಅಸೀಫ್, ಯಂಕಪ್ಪ, ಹೊಳೆಯಪ್ಪ ದಿದ್ದಿಗಿ, ಅಬೂಬಕರ್, ಎಂ.ಡಿ.ಮಂಜಿಲ್. ಶೇಖ್, ಸುಹೈಲ್ ಅಲಿ, ಸಬ್ಜಲಿಸಾಬ್, ಶಫಿ ಸೇರಿದಂತೆ ಇನ್ನಿತರರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಧಾರವಾಡದ ಮುಸ್ಲಿಂ ವರ್ತಕನ ಕಲ್ಲಂಗಡಿ ಹಣ್ಣು ಧ್ವಂಸ: ದುಷ್ಕರ್ಮಿಗಳ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...