Homeಕರ್ನಾಟಕಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು

- Advertisement -
- Advertisement -

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಬಡ ವ್ಯಾಪಾರಿ ನಬಿಸಾಬ್ ಅವರ ಮೇಲೆ ಗೂಂಡಾಗಿರಿ ನಡೆಸಿ, ತಿನ್ನುವ ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಅಮಾನವೀಯಕೃತ್ಯ ಎಸಗಿರುವ ಶ್ರೀರಾಮಸೇನೆಯ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಗೂ ಮುನ್ನ ಬಹುತ್ವ ಕರ್ನಾಟಕ ವೇದಿಕೆಯಡಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು. ಹಿಂದೂ-ಮುಸ್ಲಿಂ ವ್ಯಾಪಾರಿಗಳು ಪರಸ್ಪರ ಸಹೋದರರು, ಕೋಮುವಾದಿ ಸಂಘಟನೆಗಳು ಹಾಗೂ ವ್ಯಕ್ತಿಗಳು ನಮ್ಮ ನಡುವಿನ ಸಾಮರಸ್ಯ ಕದಡಲು ಸಾಧ್ಯವಿಲ್ಲ ಎಂದು ಏಕತೆಯ ಸಂಕೇತ ಬಿಂಬಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಗಾರ ಅಶೋಕ ನಂಜಲದಿನ್ನಿ, “ಕೆಲವು ಕೋಮುವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳು ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರಿಗೆ ಧರ್ಮದ ನಶೆ ಏರಿಸಿ; ಇಲ್ಲ-ಸಲ್ಲದ ಕಪೋಲ ಕಲ್ಪಿತ ದುಷ್ಟ ವಿಚಾರಗಳನ್ನು ತಲೆಯಲ್ಲಿ ತುಂಬಿ, ಬಡ ಮುಸ್ಲಿಂ ಜನರ ಮೇಲೆ ಎತ್ತಿಕಟ್ಟಿ ಅವರ ಬದುಕನ್ನು ಹಾಳುಮಾಡುತ್ತಿದ್ದಾರೆ. ಇಂತವರಿಂದ ಪ್ರೇರೇಪಣೆಗೊಂಡು ದುಷ್ಕೃತ್ಯ ನಡೆಸಿದ ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರು ಜೈಲಿಗೆ ಹೋದರೆ ಬದುಕು ಬೀದಿಗೆ ಬೀಳುತ್ತದೆ. ಪರಸ್ಪರ ದಲಿತ, ಶೂದ್ರ ಹಾಗೂ ಹಿಂದುಳಿದ ವರ್ಗದವರನ್ನು ಮುಸ್ಲಿಂ ಸಮುದಾಯದವರ ಮೇಲೆ ಛೂ ಬಿಟ್ಟು ಇತ್ತ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಅವರ ಹಿಡನ್ ಅಜೆಂಡಾವಾಗಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಬಹುತ್ವ ವೇದಿಕೆಯ ಸಂಚಾಲಕ ನಾಗರಾಜ ಪೂಜಾರ್ ಮಾತನಾಡಿ, “ಕಳೆದ ಹಲವು ದಿನಗಳಲ್ಲಿ ರಾಜ್ಯಾದ್ಯಂತ ಕೋಮುಸಾಮರಸ್ಯ ಕದಡುವಂತಹ ದುಷ್ಕೃತ್ಯಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಗೃಹ ಸಚಿವರೇ ಬಹಿರಂಗವಾಗಿ ಕೋಮು ಸಂಘಟನೆಗಳ ಏಜೆಂಟರಂತೆ ಮಾತನಾಡುತ್ತಿದ್ದಾರೆ. ಇನ್ನು ಮುಖ್ಯಮಂತ್ರಿಗಳು ಈ ಹಿಂದೆಯೇ ಕ್ರಿಯೆಗೆ-ಪ್ರತಿಕ್ರಿಯೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮತೀಯವಾದ ಮತ್ತು ಮತೀಯವಾದಿಗಳನ್ನು ಬೆಂಬಲಿಸಿ ಸಂವಿಧಾನ ಮತ್ತು ನಾಡಿನ ಜನರಿಗೆ ದ್ರೋಹ ಬಗೆದಿದ್ದಾರೆ” ಎಂದು ಹೇಳಿದರು.

ಮನುಜಮತ ಬಳಗದ ಬಸವರಾಜ ಬಾದರ್ಲಿ ಮಾತನಾಡಿ, “ಕೋಮುವಾದಿ ಬಜರಂಗಿಗಳು ಬಡ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಬೀದಿ ಎಸೆದು ರೈತರಿಗೆ, ಅವರ ಶ್ರಮಕ್ಕೆ ಅವಮಾನ ಮಾಡಿದ್ದಾರೆ. ಶಾಂತಿ-ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ-ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಕೆಲ ಶಕ್ತಿಗಳು ಹವಣಿಸುತ್ತಿದ್ದು ಅದರ ಭಾಗವಾಗಿ ಈ ಘಟನೆ ನಡೆದಿದೆ” ಎಂದು ವಿಶ್ಲೇಷಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಮುಖಂಡ ರಾಮಯ್ಯ ಜವಳಗೇರಾ ಮಾತನಾಡಿ, “ಸಂಪೂರ್ಣ ಆಡಳಿತ ವೈಫಲ್ಯ ಕಂಡಿರುವ ಬಿಜೆಪಿ ಸರ್ಕಾರವು ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜಿತ ಕಾರ್ಯತಂತ್ರದಭಾಗವಾಗಿ ಜನರ ಮನಸ್ಸನ್ನು ದಿಕ್ಕು ತಪ್ಪಿಸಲು, ಕೋಮುವಾದಿ ಸಂಘಟನೆಗಳ ದುಷ್ಕೃತ್ಯಗಳಿಗೆ ಪ್ರೋತ್ಸಾಹಿಸುತ್ತಿರುವುದಲ್ಲದೇ ಧರ್ಮ/ ಧರ್ಮಗಳ ನಡುವೆ ಕೋಮುಗಲಭೆ ಸೃಷ್ಟಿಮಾಡಲು ಕೀಳುಮಟ್ಟಕ್ಕಿಳಿದು ಏನೆಲ್ಲಾ ಹುನ್ನಾರ ನಡೆಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವೆಂಕಟೇಶ ಗಿರಿಜಾಲಿ, ಮಂಜುನಾಥ ಗಾಂಧಿನಗರ, ಬಸವರಾಜ ಹಸಮಕಲ್, ಶಾಮೀದ್‌ಸಾಬ್ ಸಿದ್ರಾಂಪುರ, ಸೈಯ್ಯದ್ ಬಾಷಾ, ಹುಸೇನ್ ಬಾಷಾ, ಖಾಸಿಂಸಾಬ್, ಸಮ್ಮದ್ ಚೌದ್ರಿ, ಪಂಪಾಪತಿ, ಅರ್ಶದ್, ಎಂ.ಎಡಿ.ಅಸೀಫ್, ಯಂಕಪ್ಪ, ಹೊಳೆಯಪ್ಪ ದಿದ್ದಿಗಿ, ಅಬೂಬಕರ್, ಎಂ.ಡಿ.ಮಂಜಿಲ್. ಶೇಖ್, ಸುಹೈಲ್ ಅಲಿ, ಸಬ್ಜಲಿಸಾಬ್, ಶಫಿ ಸೇರಿದಂತೆ ಇನ್ನಿತರರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಧಾರವಾಡದ ಮುಸ್ಲಿಂ ವರ್ತಕನ ಕಲ್ಲಂಗಡಿ ಹಣ್ಣು ಧ್ವಂಸ: ದುಷ್ಕರ್ಮಿಗಳ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...