Homeಚಳವಳಿಇಂದು ನಮ್ಮೀ ನಾಡು…

ಇಂದು ನಮ್ಮೀ ನಾಡು…

ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ?

- Advertisement -
- Advertisement -

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ನೆಲ ಶಿವರಾಮ ಕಾರಂತ, ಕೋ. ಲ. ಕಾರಂತ,  ಬಿ. ವಿ. ಕಾರಂತ, ಗೋಪಾಲಕೃಷ್ಣ ಅಡಿಗ, ಸೇಡಿಯಾಪು ಕೃಷ್ಣಭಟ್ಟ ಅವರ ತವರು ನೆಲ; ಪಂಜೆ ಮಂಗೇಶರಾಯರ ತವರು ಆ ನೆಲ; ಗೊಲ್ಗೊಥಾ ಮತ್ತು ವೈಶಾಖಿ ಖಂಡಕಾವ್ಯಗಳನ್ನು ಬರೆದ ಗೋವಿಂದ ಪೈ ಅವರ ನೆಲ; ಲಕ್ಷ್ಮೀಶ ತೋಳ್ಪಾಡಿಯವರ  ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ ಮತ್ತು ಬೆಳಕಿಗೆ ನೆರಳಿತ್ತ ಸಂಗಾತಿ ಪುಸ್ತಕಗಳಿಂದಾಗಿ ನನ್ನಂಥವರ ಮನಮೀಟಿದ ಪುತ್ತೂರಿನ ಅಜ್ಜಂದಿರು ರಾಮಚಂದ್ರ ಭಟ್ಟ ಮತ್ತು ಇಸ್ಮಾಯಿಲ್ ಕುಂಞಪ್ಪ ಅವರ ಕರುಳ ಬೇರಿನ ಬೀಡು.

ರಾಮಚಂದ್ರ ಭಟ್ಟರು ಮತ್ತು ಇಸ್ಮಾಯಿಲ್ ಕುಂಞಪ್ಪ
Photo Courtesy: mysorepoetWordPress.com

ಶಿವಮೊಗ್ಗ ಜಿಲ್ಲೆ ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಪಿ. ಲಂಕೇಶ್, ಯು.ಆರ್. ಅನಂತಮೂರ್ತಿ ಮತ್ತು ಕೆ. ವಿ. ಸುಬ್ಬಣ್ಣ ಅವರು ಹುಟ್ಟಿ, ಬೆಳಗಿದ ನೆಲ. ನಿತ್ಯೋತ್ಸವ ಎಂಬ ಹಾಡನ್ನು ಬರೆದು ಕರ್ನಾಟಕದ ನೆಲವನ್ನು ಕೀರ್ತಿಸಿದ ನಿಸಾರ್ ಅಹಮದ್ ಅವರು ನೆಲೆಸಿ, ಒಲಿದು, ಒಲಿಸಿಕೊಂಡ ನೆಲ ಅದು, ಬೆಣ್ಣೆ ಕದ್ದ ನಮ್ಮ ಕೃಷ್ಣದಂಥ ಮುಪ್ಪಿಲ್ಲದ ಹಾಡುಗಳನ್ನು ಅವರು ಬರೆದ ನೆಲೆವೀಡು. ಪ್ರಭುದೇವ ಅಲ್ಲಮ ಹುಟ್ಟಿ, ಸಿದ್ಧನಾದದ್ದು, ಮಹದೇವಿಯಕ್ಕ ಹುಟ್ಟಿ, ಸಿದ್ಧಳಾದದ್ದು, ಅಲ್ಲಿ.

ಧಾರವಾಡ ಎಂದರೆ ನನ್ನಂಥವರಿಗೆ ಬೇಂದ್ರೆ, ಬೇಂದ್ರೆ, ಬೇಂದ್ರೆಯೇ. ಜೊತೆಗೆ, ಸಾತ್ತ್ವಿಕ ಹರಿಹರಿತ ಸವಾಲಿಗೆ ನಿಂತ ಆ ಘನಘನ ಶಂಬಾ, ಶಂಬಾ ಜೋಷಿ. ಮತ್ತು, ಅಣ್ಣ ಬಸವಣ್ಣನ ಒಕ್ಕಲು ತಾವೆಂಬವರ ವಿದ್ಯಾಕಾಶಿ.

ಕೋಲಾರ ಎಂದರೆ ಮಾಗಿದ ಮಾತು: ಮಾಸ್ತಿಯ ಅಯ್ಯ, ಡಿವಿಜಿ. ಕೋಲಾರ ಎಂದರೆ ಎದೆಮೀಟೊ ಹಾಡು:  ಕೈವಾರ ತಾತಯ್ಯ.

ಇನ್ನು ಮೇಲುಕೋಟೆ ಎಂದರೆ, ಅದೇ… ಅಹಲ್ಯೆ, ಗೋಕುಲನಿರ್ಗಮನ, ಮಲೆದೇಗುಲ, ಯದುಗಿರಿಯ ಮೌನವಿಕಾಸ, ಶರ್ವರೀ ಸುಷಮೆ ಬರೆದ ಆರ್ದ್ರತೆ, ರಸಿಕತೆಯ ಮೂರುತಿ – ಪು. ತಿ. ನ.

 

ಆದರೆ ಈಗ, ಕಡಲ ತೀರದ ಆ ಜಿಲ್ಲೆಗಳಲ್ಲಿ, ಶಿವಮೊಗ್ಗ ಸುತ್ತಿನ ಊರೂರಲ್ಲಿ, ಧಾರವಾಡದ ನುಗ್ಗಿಕೇರಿಯಲ್ಲಿ, ಕೋಲಾರದ ಮುಳಬಾಗಿಲಲ್ಲಿ, ಮೇಲುಕೋಟೆಯ ಚೆಲುವನ ಗುಡಿಯ ಮಂದಿಯಲ್ಲಿ – ಎಲ್ಲೆಲ್ಲೂ, ಎಲ್ಲೆಲ್ಲೋ – ಆಗಿರುವುದು, ಆಗುತ್ತಿರುವುದು, ಮತ್ತು ಆಗಲಿರುವುದನ್ನು ಕಂಡು ಅಲ್ಲಿ, ಯಾವ ದಿವ್ಯಲೋಕದಲ್ಲೋ, ಗೋಷ್ಠಿ ನಡೆಸುತ್ತಿರಬಹುದಾದ ಆ ನಮ್ಮ ಹಿರಿಯರಿಗೆಲ್ಲ ಹೇಗಾಗುತ್ತಿರಬೇಕು, ಕೇಳಿಕೊಳ್ಳುವುದು ಬೇಡ: ಆ ಲೋಕದಲ್ಲೂ ವಿಲಿವಿಲಿ ಒದ್ದಾಡುತ್ತಿರಬೇಕು ಅವರು.

ಆ ಅಂಥವರನ್ನು ಓದಿ, ಮೆಚ್ಚಿಕೊಂಡ ಜನರಿದ್ದೇವಲ್ಲ ನಾವು, ನೀವು… ಮಾತುಮಾತಿಗೆ ಅವರನ್ನು ನೆನೆಯುವ… ಅವರು ಆಡಿದ್ದನ್ನು, ಮಾಡಿದ್ದನ್ನು, ಬರೆದದ್ದನ್ನು ಎತ್ತಿ ಆಡುವ, ನಮ್ಮನಮ್ಮಲ್ಲೇ ಗುನುಗಿಕೊಳ್ಳುವ, ಮೆಲುಕು ಹಾಕುವ, ಭಾಷಣ ಬಿಗಿಯುವ, ಬರೆಯುವ, ಪಾಠಮಾಡುವ, ಪರೀಕ್ಷೆ ಪಾಸುಮಾಡಲು ಓದುವ… ಅವರೆಲ್ಲ ಬೆಳೆಸಿದ ಜನ ನಾವು, ನಾವಿದ್ದೇವಲ್ಲ… ಅವರ ಹೆಸರುಗಳನ್ನು ಹೇಳಿ ಬೀಗುವ ನಾವು, ಈ ನಾನು, ಈ ನೀವು… ನಾವು  ಈಗ ಏನು ಮಾಡಬೇಕು, ಯೋಚಿಸೋಣ ಕನ್ನಡಿಗರೇ, ಕರುನಾಡಿಗರೇ…

ಜನಿವಾರ ಹಾಕಿಕೊಂಡೋ ಹಾಕಿಕೊಳ್ಳದೆಯೋ ಗಾಯತ್ರಿ ಮಂತ್ರವನ್ನು ಬಲುಶ್ರದ್ಧೆಯಿಂದ ಮನನ ಮಾಡುವ, ಮಣಮಣಿಸುವ ನಾವು; ಶಿವದಾರ, ಕರಡಿಗೆ ಹಾಕಿಯೋ ಹಾಕಿಕೊಳ್ಳದೆಯೋ ಬಸವ ಬಳಗ, ಅಕ್ಕನ ಬಳಗ ಎಂದೆಲ್ಲ ಕಟ್ಟಿಕೊಂಡು ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ ಎಂದೆಲ್ಲ ಗಳಹುವ ನಾವು; ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ, ವಿಚಾರ ಕ್ರಾಂತಿಗೆ ಆಹ್ವಾನ, ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ ಮುಂತಾದ್ದೆಲ್ಲ ಓದಿಕೊಂಡವರು, ಪಾಠ ಮಾಡುವವರು, ಹೇಳಿಸಿಕೊಂಡವರು ಎನ್ನುತ್ತ, ಎಂದುಕೊಳ್ಳುತ್ತ ಉಬ್ಬುವ ನಾವು; ಬಾಳ್ವೆಯೇ ಬೆಳಕು ಎಂದು ಒದರುವ ನಾವು; ವಿಶ್ವಮಾತೆಯ ಗರ್ಭಕಮಲಜಾತ ಪರಾಗ ಪರಮಾಣು ಕೀರ್ತಿ ನಾನು ಎಂದು ನಾಟಕೀಯವಾಗಿ ಹೇಳುವ, ಹೇಳಿಸುವ ನಾವು — ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ? ಈ ನಮ್ಮವರ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಬೇಕಾದ ಧೈರ್ಯದ ಮಾತತ್ತಿರಲಿ, ಯೋಗ್ಯತೆಯನ್ನೂ ಕಳೆದುಕೊಳ್ಳುತ್ತಿದ್ದೇವಲ್ಲ ನಾವು…

ಅಡಿಗರ ಇಂದು ನಮ್ಮೀ ನಾಡು ಕವನ ಹೇಳುವಂತೆ, ಇಲ್ಲಿ:

ತೇರ ಹಿಡಿದೆಳೆದ ಕೈ, ಬಾಗಿ ಪೊಡಮಟ್ಟ ಮೈ
ಭಕ್ತಿ ತುಳುಕಾಡಿದ್ದ ಅಂತರಂಗ
ಈಗ ನರಕಕ್ಕೆ ಕೈಮರ, ಕರಡಿಗುಹೆ, ಘೋರ
ರಾಕ್ಷಸತೆ ಭೋರಿಡುವ ನಾಟ್ಯರಂಗ

ಅದು ಬೇಡ, ಬೇಡ. ಒಮ್ಮೆ ನಮ್ಮನಮ್ಮ ಮುಖವನ್ನು  ನಮ್ಮನಮ್ಮ ಒಳಗನ್ನಡಿಯಲ್ಲಿ ನಾವೇ ನೋಡಿಕೊಳ್ಳೋಣಲಂಕೇಶರ ದೇಶಭಕ್ತಗದ್ಯಗೀತೆ ಯನ್ನು ಉಸುರಿಕೊಳ್ಳುತ್ತ ನಮ್ಮನಮ್ಮ ಮುಸುಡಿಗೆ ನಾವೇ ಥೂ ಥೂ ಎನ್ನೋಣಚೊಕ್ಕವಾಗೋಣ. ಆಗಿ, ಮನೆಮಂದಿಯ ತಬ್ಬಿ ನಿಲ್ಲೋಣ.

ಕಡೆಯ ಮಾತು. ಕನ್ನಡಕ್ಕೆ ಎಂಟೆಂಟು ಜ್ಞಾನಪೀಠ ಪ್ರಶಸ್ತಿ ಬಂದಿದೆ, ಕರುನಾಡಿಗೆ ಸಂದ ಗೌರವ ಅದು, ಸವಿಗನ್ನಡಕ್ಕೆ ಸಂದ ಮನ್ನಣೆ ಎಂದೆಲ್ಲ ಹಿಗ್ಗುತ್ತೇವಲ್ಲ ನಾವು. ಯೋಚಿಸೋಣ, ಆ ಪ್ರಶಸ್ತಿ ಪಡೆದ ಮೊದಲ ಏಳು ಜನ ಈಗ ಇಲ್ಲಿ ಇದ್ದಿದ್ದರೆ ಒದ್ದಾಡುತ್ತಿದ್ದರು, ಆದರೆ ಖಂಡಿತಾ ಸುಮ್ಮನಿರುತ್ತಿರಲಿಲ್ಲ: ನಮ್ಮನಿಮ್ಮ ಆ ಮನೆಮಂದಿಯನ್ನು ಅಪ್ಪಿಕೊಂಡು, ಇಂದಿನ ಫ್ಯಾಶಿಸ್ಟರಿಗೆ ಖಂಡಿತಾ ಅಡ್ಡ ನಿಲ್ಲುತ್ತಿದ್ದರು ಅವರು.

ಈಗ ನಮ್ಮ ನಡುವೆ ಇರುವ ಜ್ಞಾನಪೀಠಸ್ಥರು ಒಬ್ಬರು ಮಾತ್ರ. ಆ ಹಿರಿಯರಿಂದ, ಮನೆಮಂದಿಯ ಕಾಯುವ ಸೊಲ್ಲೇ ಇಲ್ಲ, ಏಕೆ?

  • ರಘುನಂದನ

(ಲೇಖಕರು, ಕವಿ, ರಂಗನಿರ್ದೇಶಕರು, ಬೆಂಗಳೂರು)

*******


ಇದನ್ನೂ ಓದಿ: ಅಧ್ಯಾಪನದ ಧರ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಹೇಳಿದ ಮಾತುಗಳು ೧೦೦ಕ್ಕೆ ೧೦೦%ಸತ್ಯ ಸರ್ ಇದರ ಬಗ್ಗೆ ನಾವೆಲ್ಲ ಯೋಚಿಸಲೇ ಬೇಕು, ತಡೆಯಬೇಕು

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...