Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...