Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....