Homeಕರ್ನಾಟಕಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

- Advertisement -
- Advertisement -

ಉಡುಪಿಯ ಲಾಡ್ಜ್‌‌ನಲ್ಲಿ ಜೀವ ಕಳೆದುಕೊಂಡಿರುವ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು, ಸಚಿವ ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಅವರ ಸಹೋದರ ಪ್ರಶಾಂತ್‌ ಪಾಟೀಲ್‌‌ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ.

“ನನ್ನ ತಮ್ಮ ಸಂತೋಷ್‌ ಗುತ್ತಿಗೆದಾರನಾಗಿದ್ದ, ಅವರ ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನೇರ ಕಾರಣ. 4 ಕೋಟಿ ರೂ. ಮೊತ್ತದ ಕೆಲಸ ಮಾಡಿದ್ದೇನೆ. ಹಣ ಬಂದಿಲ್ಲ, ಬಹಳ ಕಷ್ಟವಾಗಿದೆ ಎಂದು ಹೇಳಿದ್ದ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ನಮ್ಮ ಸಮುದಾಯದವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ನಮಗೆ ನ್ಯಾಯ ದೊರಕಿಸಿಕೊಡಬೇಕು” ಎಂದು‌ ಪ್ರಶಾಂತ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂತೋಷ್ ಅವರು ಸಚಿವ ಈಶ್ವರಪ್ಪ ಜೊತೆ ಚೆನ್ನಾಗಿದ್ದರು.‌ ಸಂತೋಷ್ ಪರಿಚಯವೇ ಇಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಿದ್ದಾರೆ. ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಮೃತದೇಹವನ್ನು ನಾವು ಅಂತ್ಯಕ್ರಿಯೆ ನಡೆಸುವುದಿಲ್ಲ” ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್‌ ನೋ‌ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಬರೆದಿದ್ದಾರೆ.

ಸಂತೋಷ್ ಸಾವಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್‌ ನೋಟ್‌ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್​ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.

“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...