Homeಕರ್ನಾಟಕಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

ಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ದ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಸಂತೋಷ್‌ ಅವರ ಸಹೋದರ ಪ್ರಶಾಂತ್‌ ಪಾಟೀಲ್ ನೀಡಿದ ದೂರಿನ ಪ್ರಕಾರ ಪೊಲೀಸರು ಈಶ್ವರಪ್ಪ ಸೇರಿದಂತೆ ಅವರ ಆಪ್ತರಿಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದರ ನಂತರ ಮಂಗಳವಾರದಂದು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೂ ಮುಂಚೆ ಮಾಧ್ಯಮಗಳಿಗೆ ಕಳುಹಿಸಿದ ಡೆತ್‌ ನೋಟ್‌ನಲ್ಲಿ ಅವರು, ‘‘ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ” ಎಂದು ನೇರವಾಗಿ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಡುಪಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಒಂದನೇ ಆರೋಪಿಯಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡನೇ ಆರೋಪಿಯಾಗಿ ಅವರ ಆಪ್ತ ಬಸವರಾಜ ಮತ್ತು ಮೂರನೇ ಆರೋಪಿಯಾಗಿ ಅವರ ಮತ್ತೊಬ್ಬ ಆಪ್ತ ರಮೇಶ್‌ ಸೇರಿದಂತೆ ಇತರರನ್ನು ಹೆಸರಿಸಲಾಗಿದೆ.

ಇದನ್ನೂ ಓದಿ:ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ತಾವು ಕೈಗೊಂಡಿರುವ 4 ಕೋಟಿ ರೂ.ಗಳ ಕಾಮಗಾರಿಯಲ್ಲಿ 40% ದಷ್ಟು ಕಮಿಷನ್ ನೀಡುವಂತೆ ಸಚಿವರ ಸಂಗಡಿಗರು ಒತ್ತಾಯಿಸಿದ್ದಾರೆ ಎಂದು ಪ್ರಶಾಂತ್‌ ಪಾಟೀಲ್‌ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಸಚಿವ ಈಶ್ವರಪ್ಪ ಅವರು, ಸಂತೋಷ್‌ ಯಾರೆಂದು ತನಗೆ ಗೊತ್ತಿಲ್ಲ ಎಂದು ನಿನ್ನೆಯೆ ಹೇಳಿದ್ದಾರೆ. ಜೊತೆಗೆ ಅವರ ಸಾವಿನ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಕೋರಿದ್ದ ಪ್ರತಿಪಕ್ಷ ಕಾಂಗ್ರೆಸ್‌‌ನ ಬೇಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...