Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...