Homeಕರ್ನಾಟಕ40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ...

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

- Advertisement -
- Advertisement -

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ರಾಜ್ಯ ಗುತ್ತಿಗೆದಾರರಸಂಘದ ಅಧ್ಯಕ್ಷ ಡಿ.ಕೆಂಪಣ್ಣ, “ಗುತ್ತಿಗೆದಾರರಿಂದ 40% ಕಮಿಷನ್‌ ಪಡೆಯುತ್ತಿರುವುದು ನಿಜ. ಈ ಕುರಿತು ಈ ಹಿಂದೆಯೇ ಪತ್ರ ಬರೆಯಲಾಗಿತ್ತು. ಇಷ್ಟು ದಿನವಾದರೂ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡಲಿಲ್ಲ. ಸರ್ಕಾರದ ಸ್ಪಷ್ಟ ನಿಲವು ಕೂಡ ವ್ಯಕ್ತವಾಗಿಲ್ಲ. ಈಗಲಾದರೂ ನಿಲುವು ತಾಳುತ್ತಾರೋ ಗೊತ್ತಿಲ್ಲ” ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂತಾಪ ಸೂಚಿಸಿದ ಅವರು, “ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಂತೋಷ್‌ ಪಾಟೀಲ್‌ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸತ್ಯ ಹೊರಬರುವುದಿಲ್ಲ. ಸಂತೋಷ ಅವರ ಪತ್ನಿ ಜಯಶ್ರೀ ಅವರಿಗೆ ಎರಡು ಕೋಟಿ ರೂ. ಪರಿಹಾರ ಕೊಡಬೇಕು. ಉಳಿಕೆ ಬಿಲ್‌ಗಳನ್ನೆಲ್ಲ ಕ್ಲಿಯರ್‌ ಮಾಡಿಕೊಡಬೇಕು. ಜಯಶ್ರೀಯವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ಸಂತೋಷ್ ಪಾಟೀಲ್ ಯಾರೆಂದೇ ಗೊತ್ತೇ ಇಲ್ಲ, ಕಾಮಗಾರಿಗಳನ್ನು ಮಾಡಿಯೇ ಇಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಘಟನೆಯಾದ ಬಳಿಕ ಎಲ್ಲರೂ ಹಾಗೆಯೇ ಹೇಳುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಅವರು ಈಶ್ವರಪ್ಪನವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ, ಅವರಿಗೆ ಲೆಟರ್‌ಗಳನ್ನು ಕೊಟ್ಟಿದ್ದಾರೆ. ಇವುಗಳಿಗೆಲ್ಲ ದಾಖಲೆ ಇವೆ. ಕಳ್ಳರು ಯಾವತ್ತಾದರೂ ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

“ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತವಾಗಿವೆ. 40 ಪರ್ಸೆಂಟ್‌ ಭ್ರಷ್ಟಾಚಾರ ಮಾಡಿದರೆ ಅಭಿವೃದ್ಧಿ ಸಾಧ್ಯವೆ? 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ. ಅದಕ್ಕಾಗಿಯೇ ನಾವು ಸ್ವತಂತ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ” ಎಂದು ಮತ್ತೊಮ್ಮೆ ಆಗ್ರಹಿಸಿದರು.

ಗುತ್ತಿಗೆದಾರರ ನಿತ್ಯದ ನೋವುಗಳನ್ನು ಬಿಚ್ಚಿಟ್ಟ ಕೆಂಪಣ್ಣನವರು, “ಪೇಮೆಂಟ್‌ಗಾಗಿ ಗುತ್ತಿಗೆದಾರರು ಇಲಾಖೆಗಳನ್ನು ಅಲೆಯುತ್ತಿದ್ದಾರೆ. 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ ಎಂದರೆ ಅಲೆದಾಟ ಎಷ್ಟಿರಬಹುದೆಂದು ಊಹಿಸಿ. 40% ಪರ್ಸೆಂಟ್‌ ಕಮಿಷನ್‌ ಕೊಟ್ಟು ನಾವು ಒಳ್ಳೆಯ ಕಾಮಗಾರಿಯನ್ನು ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ’ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಹಳ ಸಂತೋಷ. ಕೇಸ್ ಹಾಕಿಕೊಳ್ಳಲಿ. ಆದರೆ ನಾನು ಕಾಂಗ್ರೆಸ್‌ನವನೆಂದು ಫ್ರೂವ್ ಮಾಡಲಿ. ನಿಜವಾಗಿ ಹೇಳುವುದಾದರೆ ಸುಧಾಕರ್‌ ಅವರೇ ಕಾಂಗ್ರೆಸ್‌ನವರು. ಈಗ ಬಿಜೆಪಿ, ಮುಂದೆ ಕಾಂಗ್ರೆಸ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು.

ಮುಂದಿನ ನಡೆಯ ಬಗ್ಗೆ ತಿಳಿಸಿದ ಅವರು, “ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈಶ್ವರಪ್ಪ ಮಾರ್ಯಾದೆ ಕೊಡುತ್ತಿರಲಿಲ್ಲ: ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗನ್ನಾಥ್‌ ಶೇಗಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಗುತ್ತಿಗೆದಾರರು ಈಶ್ವರಪ್ಪನವರ ಮನೆಗೆ ಹೋದರೆ ಗೆಟ್‌ಔಟ್‌ ಎಂದು ಹೇಳುತ್ತಿದ್ದರು. ಗುತ್ತಿಗೆದಾರರಿಗೆ ಈಶ್ವರಪ್ಪ ಮರ್ಯಾದೆ ಕೊಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕಾಮಗಾರಿ ಬಿಲ್‌ಗಾಗಿ ಈಶ್ವರಪ್ಪನವರ ಮನೆಗೆ ಹೋದ್ರೆ ಗದರುತ್ತಿದ್ದರು. ಹಲವು ಇಲಾಖೆಗಳಲ್ಲಿ ಕಾಮಗಾರಿ ಬಿಲ್‌ಗಳು ಆಗಿಲ್ಲ. ಕಾಮಗಾರಿಗಳ ಆರಂಭಕ್ಕೂ ಮುನ್ನವೇ ಪರ್ಸೆಂಟೇಜ್‌ ಕೇಳಿದ್ದಕ್ಕೆ ಹಲವು ಕಾಮಗಾರಿಗಳಿಗೆ ಪೂಜೆಯೇ ಆಗಿಲ್ಲ. ಬಿಲ್ ಪಾಸ್ ಮಾಡಿಸಿಕೊಳ್ಳಲು ಎಲ್ಲರಿಗೂ ಲಂಚ ನೀಡಬೇಕು. ಅಧಿಕಾರಿಗಳಿಂದ ಜನಪ್ರತಿನಿಧಿಗಳವರೆಗೆ ಪರ್ಸೆಂಟೇಜ್‌ ನೀಡಬೇಕು ಎಂದು ‌ಅಳಲು ತೋಡಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....