Homeಕರ್ನಾಟಕ40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

‘40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಪತ್ರ ಬರೆದಿತ್ತು. ನರೇಂದ್ರ ಮೋದಿಯವರು ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ?’

- Advertisement -
- Advertisement -

ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40% ಕಮಿಷನ್ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ ಎಂದು ಅವರು ಘೋಷಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುತ್ತೇವೆ. ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂಬರ್ 2 ಸ್ಥಾನಕ್ಕೇರಿಸಿದ್ದ ಮುಖ್ಯಮಂತ್ರಿಯೂ ಸೇರಿದಂತೆ ಸಾಲು ಸಾಲು ಸಚಿವರು ಜೈಲು ಸೇರಿದ್ದನ್ನು ದೇಶ ಕಂಡಿದೆ. ಈಗ ಈ ಭ್ರಷ್ಟರ ಎರಡನೇ‌ ಅಂಕ ಶುರುವಾಗಿದೆ. ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದಿದ್ದಾರೆ.

ಜಬಾಬ್ದಾರಿಯುತ ವಿರೋಧ ಪಕ್ಷವಾಗಿ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಇದು ನಮ್ಮ ಕರ್ತವ್ಯ. ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು ಎಂದು ಎಚ್ಚರಿಸಿದ್ದಾರೆ.

ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು. ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ‌ ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ‌ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಸಚಿವ ಈಶ್ವರಪ್ಪ ಮೇಲೆ ನಿನ್ನೆಯೇ ಎಫ್.ಐ.ಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ. ರಾಜೀನಾಮೆ ಕೊಡುವುದಿಲ್ಲ ಎಂದು ಹಟ ಹಿಡಿದಿರುವ ಈಶ್ವರಪ್ಪನವರಿಗೆ ನರೇಂದ್ರ ಮೋದಿಯಾದಿಯಾಗಿ ಎಲ್ಲಾ ನಾಯಕರು ಮತ್ತು ಸರ್ಕಾರ ಹೆದರುತ್ತಿರುವುದು ಯಾಕೆ? 40% ಕಮಿಷನ್ ನಲ್ಲಿ ಪಾಲು‌ಪಡೆದವರೆಲ್ಲರ ಹೆಸರು ಬಯಲು ಮಾಡುತ್ತೇನೆ ಎಂದು ಈಶ್ವರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ? ಎಂದು ಕೇಳಿದ್ದಾರೆ.

ಸಚಿವ ಈಶ್ವರಪ್ಪ ಅವರ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ -13 ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು. ಇದೊಂದು ಗಂಭೀರ ಸ್ವರೂಪದ ಅಪರಾಧ, ಕೂಡಲೇ ಅವರ ಬಂಧನವಾಗಬೇಕು ಎಂದು ಒತ್ತಾಯಿಸುತ್ತೇನೆ. ಈಶ್ವರಪ್ಪ ಅವರನ್ನು ಅನೇಕ ಬಾರಿ ಭೇಟಿ ಮಾಡಿದರೂ ಪ್ರಯೋಜನವಾಗದ ಕಾರಣಕ್ಕೆ ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದರು. ಇವರ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶದಿಂದ ಸಂತೋಷ್ ಪಾಟೀಲ್ ಉಡುಪಿಗೆ ಹೋಗಿದ್ದರು. ತಮ್ಮ ಕೊನೆ ಪ್ರಯತ್ನವೂ ಫಲ ನೀಡದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.‌‌ ಇದರಿಂದ ಕಮಿಷನ್ ಗಾಗಿ ಕಿರುಕುಳ ನೀಡಿದ ಸಚಿವರು ಮಾತ್ರವಲ್ಲ‌ ಮುಖ್ಯಮಂತ್ರಿಗಳೂ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆ ಎಂಬ ಭರವಸೆ ನಮಗಿದೆ ಎಂದಿದ್ದಾರೆ.


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...